ಮಂಡ್ಯ

ಕಾಂಗ್ರೆಸ್‌ ಶಾಸಕರಲ್ಲಿ ಅತೃಪ್ತಿಯ ಬೇಗುದಿ: ಎಚ್ .ಡಿ.ಕುಮಾರಸ್ವಾಮಿ

ಶಾಸಕರಲ್ಲಿ ಅತೃಪ್ತಿಯ ಬೇಗುದಿ ಇದೆ, ಅದು ಯಾವಾಗ ಅಸ್ಫೋಟಿಸುತ್ತೋ ಗೊತ್ತಿಲ್ಲ

ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ; ಎಚ್ .ಡಿ.ಕುಮಾರಸ್ವಾಮಿ ಭವಿಷ್ಯ

ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು ತೆಗೆಯುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು.

ಮಂಡ್ಯದಲ್ಲಿ ಉದ್ಯೋಗ ಮೇಳದ ಸಮಾರೋಪದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

2028ರವರೆಗೆ ಈ ಸರ್ಕಾರ ನಡೆಯಲ್ಲ. ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು ಸಚಿವರು.

ಸರ್ಕಾರದ ನಿಷ್ಕ್ರಿಯತೆಯಿಂದ ಶಾಸಕರು ಹಳ್ಳಿಗೆ ಹೋಗಿ ಜನರನ್ನು ಭೇಟಿ ಮಾಡದಂತಹ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರದ ನಡವಳಿಕೆ ಬಗ್ಗೆ ಅವರಲ್ಲೇ ವಿಪರೀತ ಅಸಮಾಧಾನ ಇದೆ, ಅದು ಸ್ಪೋಟವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

2028ರ ವರೆಗೆ ಈ ಸರ್ಕಾರ ನಡೆಯಲ್ಲ ಎನ್ನುವುದು ಖಚಿತ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಜನರು ಒಂದು ಅವಕಾಶ ಕೊಡುತ್ತಾರೆ ಸಿಗುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ. ನಾನು ಜ್ಯೋತಿಷ್ಯಗಾರನಲ್ಲ‌, ಆದರೂ ಹೇಳುತ್ತಿದ್ದೇನೆ ಎಂದರು ಸಚಿವರು.

ಜನ ಮತ್ತೆ ತೀರ್ಮಾನ ಮಾಡ್ತಾರೆ ಅನ್ನುವ ವಿಶ್ವಾಸದಲ್ಲಿದ್ದೇನೆ. ಜನ ಬಯಸಿದರೆ ಯಾಕೆ ಆಗಬಾರದು‌? ನಾನು ಮುಖ್ಯಮಂತ್ರಿ ಸ್ಥಾನ ಐದು ವರ್ಷಗಳ ಸರ್ಕಾರ ಕೊಡಿ ಅಂತ ಜನತೆಗೆ ಈಗಲೂ ಮನವಿ ಮಾಡುತ್ತೇನೆ. ನನ್ನ 14 ತಿಂಗಳ ಆಡಳಿತ, ಬೇರೆಯವರ ಹಂಗಿನಲ್ಲಿ ಮಾಡಿದ್ದು. ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಿದಾಗಲೂ ನಾಡಿಗೆ ಕೊಟ್ಟ ಜನಪರ ಕಾರ್ಯಕ್ರಮಗಳ ಬಗ್ಗೆ ಜನ ಮರೆತಿಲ್ಲ ಎಂದರು ಅವರು.

ಕರ್ನಾಟಕ ಸಮೃದ್ಧಿಯ ನಾಡು. ಒಂದು ಅವಕಾಶ ಕೊಟ್ಟರೆ ನಾನು ಉತ್ತಮ ಕೆಲಸ ಮಾಡುತ್ತೇನೆ. ಯಾವ ಕುಟುಂಬವೂ ತಮ್ಮ ಬದುಕಿಗಾಗಿ ಕೈ ಒಡ್ಡುವ ಪರಿಸ್ಥಿತಿ ಬರಬಾರದು. ಇನ್ನೊಬ್ಬರಿಗೆ ಕೈ ಎತ್ತಿ ಕೊಡುವ ಆರ್ಥಿಕ ಶಕ್ತಿ ಕೊಡುವ ರಾಜ್ಯ ಇದು. ಹಣ ಇವತ್ತು ಲೂಟಿಯಾಗುತ್ತಿದೆ. ಸರ್ಕಾರದ ಆಸ್ತಿ ಕಬಳಿಕೆ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಿದರೆ ಇವರು ಕೊಡುವ 2 ಸಾವಿರ ಅಲ್ಲ, ಕನಿಷ್ಠ 10 ಸಾವಿರ ಸಂಪಾದನೆ ಮಾಡುವ ಕಾರ್ಯಕ್ರಮಗಳನ್ನು ಜಾರಿ ಮಾಡಬಹುದು. ಮುಂದೆ ಜನರು ಒಂದು ಅವಕಾಶ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ ಎಂದು ನಂಬಿದ್ದೇನೆ. ನಾನು ಜ್ಯೋತಿಷ್ಯಗಾರನಲ್ಲ‌, ಆಶಾವಾದಿ ಅಷ್ಟೇ. ಈ ಸರ್ಕಾರದ ನಡವಳಿಕೆಯ ಬಗ್ಗೆ ಜನರು ಬೇಸತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

10 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

11 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

12 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

12 hours ago