ಮಂಡ್ಯ

ಕಾಂಗ್ರೆಸ್‌ ಶಾಸಕರಲ್ಲಿ ಅತೃಪ್ತಿಯ ಬೇಗುದಿ: ಎಚ್ .ಡಿ.ಕುಮಾರಸ್ವಾಮಿ

ಶಾಸಕರಲ್ಲಿ ಅತೃಪ್ತಿಯ ಬೇಗುದಿ ಇದೆ, ಅದು ಯಾವಾಗ ಅಸ್ಫೋಟಿಸುತ್ತೋ ಗೊತ್ತಿಲ್ಲ

ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ; ಎಚ್ .ಡಿ.ಕುಮಾರಸ್ವಾಮಿ ಭವಿಷ್ಯ

ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು ತೆಗೆಯುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು.

ಮಂಡ್ಯದಲ್ಲಿ ಉದ್ಯೋಗ ಮೇಳದ ಸಮಾರೋಪದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

2028ರವರೆಗೆ ಈ ಸರ್ಕಾರ ನಡೆಯಲ್ಲ. ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು ಸಚಿವರು.

ಸರ್ಕಾರದ ನಿಷ್ಕ್ರಿಯತೆಯಿಂದ ಶಾಸಕರು ಹಳ್ಳಿಗೆ ಹೋಗಿ ಜನರನ್ನು ಭೇಟಿ ಮಾಡದಂತಹ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರದ ನಡವಳಿಕೆ ಬಗ್ಗೆ ಅವರಲ್ಲೇ ವಿಪರೀತ ಅಸಮಾಧಾನ ಇದೆ, ಅದು ಸ್ಪೋಟವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

2028ರ ವರೆಗೆ ಈ ಸರ್ಕಾರ ನಡೆಯಲ್ಲ ಎನ್ನುವುದು ಖಚಿತ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಜನರು ಒಂದು ಅವಕಾಶ ಕೊಡುತ್ತಾರೆ ಸಿಗುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ. ನಾನು ಜ್ಯೋತಿಷ್ಯಗಾರನಲ್ಲ‌, ಆದರೂ ಹೇಳುತ್ತಿದ್ದೇನೆ ಎಂದರು ಸಚಿವರು.

ಜನ ಮತ್ತೆ ತೀರ್ಮಾನ ಮಾಡ್ತಾರೆ ಅನ್ನುವ ವಿಶ್ವಾಸದಲ್ಲಿದ್ದೇನೆ. ಜನ ಬಯಸಿದರೆ ಯಾಕೆ ಆಗಬಾರದು‌? ನಾನು ಮುಖ್ಯಮಂತ್ರಿ ಸ್ಥಾನ ಐದು ವರ್ಷಗಳ ಸರ್ಕಾರ ಕೊಡಿ ಅಂತ ಜನತೆಗೆ ಈಗಲೂ ಮನವಿ ಮಾಡುತ್ತೇನೆ. ನನ್ನ 14 ತಿಂಗಳ ಆಡಳಿತ, ಬೇರೆಯವರ ಹಂಗಿನಲ್ಲಿ ಮಾಡಿದ್ದು. ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಿದಾಗಲೂ ನಾಡಿಗೆ ಕೊಟ್ಟ ಜನಪರ ಕಾರ್ಯಕ್ರಮಗಳ ಬಗ್ಗೆ ಜನ ಮರೆತಿಲ್ಲ ಎಂದರು ಅವರು.

ಕರ್ನಾಟಕ ಸಮೃದ್ಧಿಯ ನಾಡು. ಒಂದು ಅವಕಾಶ ಕೊಟ್ಟರೆ ನಾನು ಉತ್ತಮ ಕೆಲಸ ಮಾಡುತ್ತೇನೆ. ಯಾವ ಕುಟುಂಬವೂ ತಮ್ಮ ಬದುಕಿಗಾಗಿ ಕೈ ಒಡ್ಡುವ ಪರಿಸ್ಥಿತಿ ಬರಬಾರದು. ಇನ್ನೊಬ್ಬರಿಗೆ ಕೈ ಎತ್ತಿ ಕೊಡುವ ಆರ್ಥಿಕ ಶಕ್ತಿ ಕೊಡುವ ರಾಜ್ಯ ಇದು. ಹಣ ಇವತ್ತು ಲೂಟಿಯಾಗುತ್ತಿದೆ. ಸರ್ಕಾರದ ಆಸ್ತಿ ಕಬಳಿಕೆ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಿದರೆ ಇವರು ಕೊಡುವ 2 ಸಾವಿರ ಅಲ್ಲ, ಕನಿಷ್ಠ 10 ಸಾವಿರ ಸಂಪಾದನೆ ಮಾಡುವ ಕಾರ್ಯಕ್ರಮಗಳನ್ನು ಜಾರಿ ಮಾಡಬಹುದು. ಮುಂದೆ ಜನರು ಒಂದು ಅವಕಾಶ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ಬರುತ್ತದೆ ಎಂದು ನಂಬಿದ್ದೇನೆ. ನಾನು ಜ್ಯೋತಿಷ್ಯಗಾರನಲ್ಲ‌, ಆಶಾವಾದಿ ಅಷ್ಟೇ. ಈ ಸರ್ಕಾರದ ನಡವಳಿಕೆಯ ಬಗ್ಗೆ ಜನರು ಬೇಸತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

22 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

2 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

2 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

2 hours ago