ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು (ಜೂ.19) ಜಿಲ್ಲಾ ಪಂಚಾಯತ್ ಆವರಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಫಲಾನುಭವಿ ಗಿರೀಶ್ ಅವರಿಗೆ ಶಕ್ತಿಮಾನ್ (ಪ್ಯಾಡಿ ಮಾಸ್ಟರ್ 3776) ಭತ್ತದ ಕಟಾವು ಯಂತ್ರ ವಿತರಣೆ ಮಾಡಿದರು.
ಸದರಿ ಯಂತ್ರದ ಒಟ್ಟು ಮೊತ್ತ 31,50,000/- ರೂ ಗಳದಾಗಿದ್ದು, ಸರ್ಕಾರದ ಸಹಾಯಧನ ರೂ 12,12,500/- ಹಾಗೂ ರೈತನ ವಂತಿಗೆ ರೂ 19,37,500/- ಗಳಾಗಿರುತ್ತದೆ.
ಈ ಯಂತ್ರದಲ್ಲಿ ಪ್ರತಿ ಗಂಟೆಗೆ ಒಂದು ಎಕರೆ ಭತ್ತದ ಗದ್ದೆಯನ್ನು ಕಟಾವು ಮಾಡಬಹುದು. ಪ್ರತಿ ಗಂಟೆಗೆ 8 ರಿಂದ 9 ಲೀಟರ್ ಡೀಸಲ್ ಬಳಕೆಯಾಗುತ್ತದೆ. 7 ಕ್ವಿಂಟಲ್ ಭತ್ತದ ಶೇಖರಣಾ ಸಾಮರ್ಥ್ಯ ಹೊಂದಿರುತ್ತದೆ.
ಇದೇ ಸಂದರ್ಭದಲ್ಲಿ ವಿಧಾನಸಭಾ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ, ಕೃಷಿ ಇಲಾಖೆ ಪಾಂಡವಪುರ ಉಪವಿಭಾಗದ ಉಪನಿರ್ದೇಶಕಿ ಮಮತಾ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…