ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು (ಜೂ.19) ಜಿಲ್ಲಾ ಪಂಚಾಯತ್ ಆವರಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಫಲಾನುಭವಿ ಗಿರೀಶ್ ಅವರಿಗೆ ಶಕ್ತಿಮಾನ್ (ಪ್ಯಾಡಿ ಮಾಸ್ಟರ್ 3776) ಭತ್ತದ ಕಟಾವು ಯಂತ್ರ ವಿತರಣೆ ಮಾಡಿದರು.
ಸದರಿ ಯಂತ್ರದ ಒಟ್ಟು ಮೊತ್ತ 31,50,000/- ರೂ ಗಳದಾಗಿದ್ದು, ಸರ್ಕಾರದ ಸಹಾಯಧನ ರೂ 12,12,500/- ಹಾಗೂ ರೈತನ ವಂತಿಗೆ ರೂ 19,37,500/- ಗಳಾಗಿರುತ್ತದೆ.
ಈ ಯಂತ್ರದಲ್ಲಿ ಪ್ರತಿ ಗಂಟೆಗೆ ಒಂದು ಎಕರೆ ಭತ್ತದ ಗದ್ದೆಯನ್ನು ಕಟಾವು ಮಾಡಬಹುದು. ಪ್ರತಿ ಗಂಟೆಗೆ 8 ರಿಂದ 9 ಲೀಟರ್ ಡೀಸಲ್ ಬಳಕೆಯಾಗುತ್ತದೆ. 7 ಕ್ವಿಂಟಲ್ ಭತ್ತದ ಶೇಖರಣಾ ಸಾಮರ್ಥ್ಯ ಹೊಂದಿರುತ್ತದೆ.
ಇದೇ ಸಂದರ್ಭದಲ್ಲಿ ವಿಧಾನಸಭಾ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ, ಕೃಷಿ ಇಲಾಖೆ ಪಾಂಡವಪುರ ಉಪವಿಭಾಗದ ಉಪನಿರ್ದೇಶಕಿ ಮಮತಾ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…