ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು (ಜೂ.19) ಜಿಲ್ಲಾ ಪಂಚಾಯತ್ ಆವರಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಫಲಾನುಭವಿ ಗಿರೀಶ್ ಅವರಿಗೆ ಶಕ್ತಿಮಾನ್ (ಪ್ಯಾಡಿ ಮಾಸ್ಟರ್ 3776) ಭತ್ತದ ಕಟಾವು ಯಂತ್ರ ವಿತರಣೆ ಮಾಡಿದರು.
ಸದರಿ ಯಂತ್ರದ ಒಟ್ಟು ಮೊತ್ತ 31,50,000/- ರೂ ಗಳದಾಗಿದ್ದು, ಸರ್ಕಾರದ ಸಹಾಯಧನ ರೂ 12,12,500/- ಹಾಗೂ ರೈತನ ವಂತಿಗೆ ರೂ 19,37,500/- ಗಳಾಗಿರುತ್ತದೆ.
ಈ ಯಂತ್ರದಲ್ಲಿ ಪ್ರತಿ ಗಂಟೆಗೆ ಒಂದು ಎಕರೆ ಭತ್ತದ ಗದ್ದೆಯನ್ನು ಕಟಾವು ಮಾಡಬಹುದು. ಪ್ರತಿ ಗಂಟೆಗೆ 8 ರಿಂದ 9 ಲೀಟರ್ ಡೀಸಲ್ ಬಳಕೆಯಾಗುತ್ತದೆ. 7 ಕ್ವಿಂಟಲ್ ಭತ್ತದ ಶೇಖರಣಾ ಸಾಮರ್ಥ್ಯ ಹೊಂದಿರುತ್ತದೆ.
ಇದೇ ಸಂದರ್ಭದಲ್ಲಿ ವಿಧಾನಸಭಾ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ, ಕೃಷಿ ಇಲಾಖೆ ಪಾಂಡವಪುರ ಉಪವಿಭಾಗದ ಉಪನಿರ್ದೇಶಕಿ ಮಮತಾ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…