District Collector Didheer visits Maddur Taluk Office Inspection
ಮದ್ದೂರು: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸಮಯಕ್ಕೆ ಸರಿಯಾಗಿ ಕೆಲಸ ಮಾಡದೇ ಇರುವವರಿಗೆ ತೀವ್ರತರದ ತಲಾಟೆ ತೆಗೆದುಕೊಂಡು ನೋಟಿಸ್ ಜಾರಿ ಮಾಡುವಂತೆ ಆದೇಶ ಮಾಡಿದರು.
ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಹಾಜರಿದ್ದ ಸಾರ್ವಜನಿಕರು ಆರ್ಟಿಸಿ ತಿದ್ದುಪಡಿ, ಪೋಡಿ ತಿದ್ದುಪಡಿ, ಜನನ- ಮರಣ ಪ್ರಮಾಣ ಪತ್ರ ಕುರಿತು ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಖುದ್ದು ಸ್ವೀಕರಿಸಿ ಕುಂದು ಕೊರತೆಗಳನ್ನು ಆಲಿಸಿದರು.
ಈ ವೇಳೆ ಸಾರ್ವಜನಿಕರು ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ದುರಾಡಳಿತ, ಸರಿಯಾದ ವೇಳೆಯಲ್ಲಿ ಕೆಲಸಕ್ಕೆ ಹಾಜರಾಗದೆ ತಮ್ಮ ಜಾಗದಲ್ಲಿ ಕುಳಿತುಕೊಳ್ಳದೆ ಅಲ್ಲಿ ಇಲ್ಲಿ ಅಲೆದಾಡುತ್ತ, ಕಾಲ ಕಳೆಯುತ್ತಿರುವ ಸಿಬ್ಬಂದಿಗಳು, ಅಧಿಕಾರಿಗಳ ಮೇಲೆ ಹಾಗೂ ಲಂಚಗುಳಿತನದ ಬಗ್ಗೆ ದೂರು ನೀಡಿದರು.
ಜಿಲ್ಲಾಧಿಕಾರಿಗಳು ಅರ್ಜಿಗಳನ್ನು ತಹಸಿಲ್ದಾರ್ ಪರುಶುರಾಮ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳಿಗೆ ನೀಡಿ ನಿಯಮಾನುಸಾರ ಅರ್ಜಿಗಳು ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸರ್ಕಾರಿ ಕೆಲಸಗಳಿಗೆ ತಾಲ್ಲೂಕು ಕಚೇರಿಗೆ ವಿನಾ ಕಾರಣ ಅಲೆದಾಡಿಸಬಾರದು. ಈ ಬಗ್ಗೆ ದೂರುಗಳು ಕಂಡುಬಂದಲ್ಲಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ನಂತರ ವಿವಿಧ ಶಾಖೆಗಳ ಅಧೀಕಾರಿಗಳು, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು. ನಿಗದಿಪಡಿಸಿರುವ ಸಮಯಕ್ಕೆ ಎಲ್ಲಾ ಅರ್ಜಿಗಳು ವಿಲೇವಾರಿ ಮಾಡಬೇಕು ಎಂದು ಎಚ್ಚರಿಸಿದರು.
ಆರ್ಟಿಸಿ ವಿತರಣಾ ಕೇಂದ್ರ ಸೇರಿದಂತೆ ವಿವಿಧ ಸರ್ವೇ ಶಾಖೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ನಿಯಮಿತ ಕಾಲಾವಧಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.
ಜನನ ಮರಣ ಶಾಖೆಯಲ್ಲಿ ನಿಯಮಿತ ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಗ್ರೇಡ್ ೨ ತಹಸೀಲ್ದಾರ್ ಆರ್. ಸೋಮಶೇಖರ್ಗೆ ರೆಕಾರ್ಡ್ ರೂಮ್ನಲ್ಲಿ ತುರ್ತಾಗಿ ನಕಲು ಒದಗಿಸಲು ಸೂಚಿಸಿದರು.
ಬಳಿಕ ತಾಲ್ಲೂಕು ಕಚೇರಿ ಕಟ್ಟಡದ ದುರಸ್ಥಿ ಕೆಲಸದ ಬಗ್ಗೆ ಪರಿಶೀಲನೆ ನಡೆಸಿದರು. ನೂತನವಾಗಿ ತಹಸಿಲ್ದಾರ್ ಪರಶುರಾಮ ಅವರು ಬಂದಿದ್ದಾರೆ. ಅವರು ಎಲ್ಲಾ ರೀತಿಯ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುತ್ತಾರೆ ಎಂದು ಸಾರ್ವಜನಿಕರಿಗೆ ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…