ಮಂಡ್ಯ

ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ

ಮಂಡ್ಯ : ಜಿಲ್ಲಾಧಿಕಾರಿ ಡಾ: ಕುಮಾರ ಅವರು ಶುಕ್ರವಾರ‌ ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸ್ವೀಕೃತ ಅಹವಾಲುಗಳನ್ನು ಶೀಘ್ರವೇ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಗೆ ತಿಳಿಸಿದರು. ಕಛೇರಿಯ ಟಪಾಲು ವಿಭಾಗದಲ್ಲಿ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಛೇರಿಯಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಇ-ಆಫೀಸ್ ಮೂಲಕವೇ ನಿರ್ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಕಚೇರಿಯಲ್ಲಿ ಒಟ್ಟು 118 ಅರ್ಜಿಗಳು ಬಾಕಿಯಿದ್ದು ಅವುಗಳಲ್ಲಿ 42 ಅರ್ಜಿಗಳು 30 ದಿನಗಳ ಮೇಲ್ಪಟ್ಟವುಗಳಾಗಿರುತ್ತವೆ. 30 ದಿನಗಳ ಮೇಲ್ಪಟ್ಟ ಅರ್ಜಿಗಳನ್ನು ಸಂಬಂಧಪಟ್ಟ ವಿಷಯ ನಿರ್ವಾಹಕರಿಗೆ ನೀಡುವಂತೆ ಹಾಗೂ ಕಡತಗಳು ನಿಗದಿತ ಸಮಯದಲ್ಲಿ ವಿಲೇವಾರಿಯಾಗುವಲ್ಲಿ ಕ್ರಮವಹಿಸುವಂತೆ ಕಛೇರಿಯ ತಹಸಿಲ್ದಾರ್ ರವರಿಗೆ ಹಾಗೂ ಸಂಬಂಧಿಸಿದ ಶಿರಸ್ತೇದಾರ್ ರವರಿಗೆ ಸೂಚನೆ ನೀಡಿದರು.

ಅಭಿಲೇಖಾಲಯ ಶಾಖೆಗೆ ಭೇಟಿ ನೀಡಿ ಏಪ್ರಿಲ್ ನಿಂದ ಈ ದಿನಾಂಕದವರೆಗೆ ಅಭಿಲೇಖಾಲಯ ಶಾಖೆಗೆ 814 ಅರ್ಜಿಗಳು ದಾಖಲಾತಿ ಕೋರಿ ಸ್ವೀಕೃತವಾಗಿದ್ದು, ಇವುಗಳಲ್ಲಿ 480 ಅರ್ಜಿಗಳನ್ನು ಮಾತ್ರವೇ ಆನ್ ಲೈನ್ ತಂತ್ರಾಂಶದ ಮೂಲಕ ಕ್ರಮವಹಿಸಲಾಗಿದ್ದು, ಉಳಿಕೆ 330 ಅರ್ಜಿಗಳನ್ನು ಭೌತಿಕವಾಗಿ ಕ್ರಮವಹಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಇನ್ನು ಮುಂದೆ ಅರ್ಜಿಗಳನ್ನೂ ಆನ್ ಲೈನ್ ಮೂಲಕವೇ ನಿರ್ವಹಿಸಬೇಕು ಸ್ಕ್ಯಾನ್ ಮಾಡಿದ ಕಡತಗಳನ್ನು ವ್ಯವಸ್ಥಿತವಾಗಿಡಲು ಕಛೇರಿಯ ಸಿಬ್ಬಂದಿಗಳಿಗೆ ತಿಳಿಸಿದರು.

ನ್ಯಾಯಾಲಯ ಪ್ರಕರಣಗಳಿಗೆ ವಿಶೇಷ ಆದ್ಯತೆ ನೀಡಿ ತುರ್ತಾಗಿ ಕ್ರಮವಹಿಸಬೇಕು. ಬಾಕಿಯಿರುವ 17 ರಿಟ್ ಪಿಟಿಷನ್ ಪ್ರಕರಣಗಳ ಬಾಬ್ತು ಶೀಘ್ರವೇ ಮಾನ್ಯ ನ್ಯಾಯಾಲಯಕ್ಕೆ ಕಂಡಿಕೆವಾರು ಉತ್ತರವನ್ನು ಸಲ್ಲಿಸಬೇಕು KPLC ಪ್ರಕರಣಗಳಿಗೆ ಸಂಬಂಧಿಸಿದಂತೆ ನೆನಪೋಲೆಗಳಿಗೆ ಆಸ್ಪದ ನೀಡದಂತೆ, ಪ್ರಕರಣಗಳನ್ನು ಇತ್ಯರ್ಥ ಪಡಿಡುವಂತೆ ಸೂಚಿಸಿದರು. ಕಛೇರಿಯ ಎಲ್ಲಾ ಶಾಖೆಗಳಿಗೂ ಭೇಟಿ ನೀಡಿ ಅರ್ಜಿ ಹಾಗೂ ಕಡತಗಳನ್ನು ಇ-ಆಫೀಸ್ ನಲ್ಲಿಯೇ ನಿಗದಿತ ಕಾಲಮಿತಿಯೊಳಗೆ ಮಂಡಿಸಿ ಇತ್ಯರ್ಥಪಡಿಸುವಲ್ಲಿ ಕ್ರಮವಹಿಸುವಂತೆ ನೌಕರರಿಗೆ ಸೂಚಿಸಿದರು.

ನಂತರ, ಶ್ರೀರಂಗಪಟ್ಟಣ ತಾಲ್ಲೂಕಿನ ಉಪ ನೋಂದಣಾಧಿಕಾರಿ ಕಛೇರಿಗೆ ಭೇಟಿ ನೀಡಿ, ಸ್ವೀಕೃತವಾದ ಅರ್ಜಿಗಳಿಗೆ ನಿಯಮಿತ ಕಾಲಾವಧಿಯಲ್ಲಿ, ಸಾರ್ವಜನಿಕರನ್ನು ಪದೇ ಪದೇ ಕಛೇರಿಗೆ ಅಲೆಯದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಉಪ ನೋಂದಣಾಧಿಕಾರಿಗೆ ಸೂಚನೆ ನೀಡಿದರು. ಸಾರ್ವಜನಿಕರ ಅನಗತ್ಯ ಅಲೆದಾಟಕ್ಕೆ ಆಸ್ಪದ ನೀಡದೇ, ತುರ್ತಾಗಿ ಅರ್ಜಿಗಳ ವಿಲೇವಾರಿಯಲ್ಲಿ ಕ್ರಮವಹಿಸುವಂತೆ ಕಛೇರಿಯ ಅಧಿಕಾರಿ/ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು. ಪರಿಶೀಲನೆ ವೇಳೆ ಶ್ರೀರಂಗಪಟ್ಟಣ ತಹಶೀಲ್ದಾರ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

43 mins ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

1 hour ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

2 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

5 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

7 hours ago