ಮಂಡ್ಯ

ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ

ಮಂಡ್ಯ : ಜಿಲ್ಲಾಧಿಕಾರಿ ಡಾ: ಕುಮಾರ ಅವರು ಶುಕ್ರವಾರ‌ ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸ್ವೀಕೃತ ಅಹವಾಲುಗಳನ್ನು ಶೀಘ್ರವೇ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಗೆ ತಿಳಿಸಿದರು. ಕಛೇರಿಯ ಟಪಾಲು ವಿಭಾಗದಲ್ಲಿ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಛೇರಿಯಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಇ-ಆಫೀಸ್ ಮೂಲಕವೇ ನಿರ್ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಕಚೇರಿಯಲ್ಲಿ ಒಟ್ಟು 118 ಅರ್ಜಿಗಳು ಬಾಕಿಯಿದ್ದು ಅವುಗಳಲ್ಲಿ 42 ಅರ್ಜಿಗಳು 30 ದಿನಗಳ ಮೇಲ್ಪಟ್ಟವುಗಳಾಗಿರುತ್ತವೆ. 30 ದಿನಗಳ ಮೇಲ್ಪಟ್ಟ ಅರ್ಜಿಗಳನ್ನು ಸಂಬಂಧಪಟ್ಟ ವಿಷಯ ನಿರ್ವಾಹಕರಿಗೆ ನೀಡುವಂತೆ ಹಾಗೂ ಕಡತಗಳು ನಿಗದಿತ ಸಮಯದಲ್ಲಿ ವಿಲೇವಾರಿಯಾಗುವಲ್ಲಿ ಕ್ರಮವಹಿಸುವಂತೆ ಕಛೇರಿಯ ತಹಸಿಲ್ದಾರ್ ರವರಿಗೆ ಹಾಗೂ ಸಂಬಂಧಿಸಿದ ಶಿರಸ್ತೇದಾರ್ ರವರಿಗೆ ಸೂಚನೆ ನೀಡಿದರು.

ಅಭಿಲೇಖಾಲಯ ಶಾಖೆಗೆ ಭೇಟಿ ನೀಡಿ ಏಪ್ರಿಲ್ ನಿಂದ ಈ ದಿನಾಂಕದವರೆಗೆ ಅಭಿಲೇಖಾಲಯ ಶಾಖೆಗೆ 814 ಅರ್ಜಿಗಳು ದಾಖಲಾತಿ ಕೋರಿ ಸ್ವೀಕೃತವಾಗಿದ್ದು, ಇವುಗಳಲ್ಲಿ 480 ಅರ್ಜಿಗಳನ್ನು ಮಾತ್ರವೇ ಆನ್ ಲೈನ್ ತಂತ್ರಾಂಶದ ಮೂಲಕ ಕ್ರಮವಹಿಸಲಾಗಿದ್ದು, ಉಳಿಕೆ 330 ಅರ್ಜಿಗಳನ್ನು ಭೌತಿಕವಾಗಿ ಕ್ರಮವಹಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಇನ್ನು ಮುಂದೆ ಅರ್ಜಿಗಳನ್ನೂ ಆನ್ ಲೈನ್ ಮೂಲಕವೇ ನಿರ್ವಹಿಸಬೇಕು ಸ್ಕ್ಯಾನ್ ಮಾಡಿದ ಕಡತಗಳನ್ನು ವ್ಯವಸ್ಥಿತವಾಗಿಡಲು ಕಛೇರಿಯ ಸಿಬ್ಬಂದಿಗಳಿಗೆ ತಿಳಿಸಿದರು.

ನ್ಯಾಯಾಲಯ ಪ್ರಕರಣಗಳಿಗೆ ವಿಶೇಷ ಆದ್ಯತೆ ನೀಡಿ ತುರ್ತಾಗಿ ಕ್ರಮವಹಿಸಬೇಕು. ಬಾಕಿಯಿರುವ 17 ರಿಟ್ ಪಿಟಿಷನ್ ಪ್ರಕರಣಗಳ ಬಾಬ್ತು ಶೀಘ್ರವೇ ಮಾನ್ಯ ನ್ಯಾಯಾಲಯಕ್ಕೆ ಕಂಡಿಕೆವಾರು ಉತ್ತರವನ್ನು ಸಲ್ಲಿಸಬೇಕು KPLC ಪ್ರಕರಣಗಳಿಗೆ ಸಂಬಂಧಿಸಿದಂತೆ ನೆನಪೋಲೆಗಳಿಗೆ ಆಸ್ಪದ ನೀಡದಂತೆ, ಪ್ರಕರಣಗಳನ್ನು ಇತ್ಯರ್ಥ ಪಡಿಡುವಂತೆ ಸೂಚಿಸಿದರು. ಕಛೇರಿಯ ಎಲ್ಲಾ ಶಾಖೆಗಳಿಗೂ ಭೇಟಿ ನೀಡಿ ಅರ್ಜಿ ಹಾಗೂ ಕಡತಗಳನ್ನು ಇ-ಆಫೀಸ್ ನಲ್ಲಿಯೇ ನಿಗದಿತ ಕಾಲಮಿತಿಯೊಳಗೆ ಮಂಡಿಸಿ ಇತ್ಯರ್ಥಪಡಿಸುವಲ್ಲಿ ಕ್ರಮವಹಿಸುವಂತೆ ನೌಕರರಿಗೆ ಸೂಚಿಸಿದರು.

ನಂತರ, ಶ್ರೀರಂಗಪಟ್ಟಣ ತಾಲ್ಲೂಕಿನ ಉಪ ನೋಂದಣಾಧಿಕಾರಿ ಕಛೇರಿಗೆ ಭೇಟಿ ನೀಡಿ, ಸ್ವೀಕೃತವಾದ ಅರ್ಜಿಗಳಿಗೆ ನಿಯಮಿತ ಕಾಲಾವಧಿಯಲ್ಲಿ, ಸಾರ್ವಜನಿಕರನ್ನು ಪದೇ ಪದೇ ಕಛೇರಿಗೆ ಅಲೆಯದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಉಪ ನೋಂದಣಾಧಿಕಾರಿಗೆ ಸೂಚನೆ ನೀಡಿದರು. ಸಾರ್ವಜನಿಕರ ಅನಗತ್ಯ ಅಲೆದಾಟಕ್ಕೆ ಆಸ್ಪದ ನೀಡದೇ, ತುರ್ತಾಗಿ ಅರ್ಜಿಗಳ ವಿಲೇವಾರಿಯಲ್ಲಿ ಕ್ರಮವಹಿಸುವಂತೆ ಕಛೇರಿಯ ಅಧಿಕಾರಿ/ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು. ಪರಿಶೀಲನೆ ವೇಳೆ ಶ್ರೀರಂಗಪಟ್ಟಣ ತಹಶೀಲ್ದಾರ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

8 hours ago