ಮಂಡ್ಯ

ಬೆಳೆ ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : ಬೆಳೆ ಸಮೀಕ್ಷೆಯ ವರದಿಯನ್ನು ಆಧರಿಸಿ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ವಿಸ್ತೀರ್ಣ ಎಣಿಕೆ ಕಾರ್ಯ, ಎನ್.ಡಿ.ಆರ್.ಎಫ್ ಸಹಾಯಧನ, ಪ್ರಕೃತಿ ವಿಕೋಪದಲ್ಲಿ ಬೆಳೆ ಹಾನಿ ವರದಿ ನೀಡಲಾಗುತ್ತದೆ. ಈ ಹಿನ್ನಲೆಯಲ್ಲಿ ಬೆಳೆ ಸಮೀಕ್ಷೆ ಕೆಲಸಗಳು ನಿಖರವಾಗಿರಬೇಕು ಹಾಗೂ ಸಮೀಕ್ಷೆ ಕೆಲಸಗಳನ್ನು ಚುರುಕುಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಳೆ ಸಮೀಕ್ಷೆಯಲ್ಲಿ ನೀಡಿದ ಗುರಿ ತಲುಪದ ಪಿ. ಆರ್ – ಪ್ರೈವೇಟ್ ರೆಸಿಡೇಂಟ್ಸ್ ಅವರನ್ನು ಬದಲಾವಣೆ ಮಾಡಿ ಹೊಸಬರನ್ನು ಆಯ್ಕೆ ಮಾಡಿಕೊಳ್ಳಿ ಎಂದರು.

ಜಿಲ್ಲೆಯು 2024-25 ನೇ ಸಾಲಿನಲ್ಲಿ ಶೇ 91.55 ರಷ್ಟು ಪೂರ್ವ ಮುಂಗಾರು, ಶೇ 96.34 ರಷ್ಟು ಮುಂಗಾರು, ಶೇ 97.68 ರಷ್ಟು ಹಿಂಗಾರು ಹಾಗೂ ಶೇ 95.84 ರಷ್ಟು ಬೇಸಿಗೆ ಹಂಗಾಮಿನಲ್ಲಿ ನಡೆದ ಸಮೀಕ್ಷೆಗಳಲ್ಲಿ ಪ್ರಗತಿ ಸಾಧಿಸಿದೆ ಎಂದು ತಿಳಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದ ಗಣನೀಯವಾಗಿ ಹೆಚ್ಚಿನ ಪ್ರದೇಶದಲ್ಲಿ ಬೆಳೆ ವಿಮೆ ನೊಂದಣಿಯಾಗಿದ್ದು, 2023-24 ನೇ ಸಾಲಿನಲ್ಲಿ ವಿವಿಧ ವಿಮಾ ವಿಪತ್ತುಗಳಡಿಯಲ್ಲಿ 39.09 ಕೋಟಿ ರೂ ಗಳಷ್ಟು ವಿಮಾ ಪರಿಹಾರಧನ ಪಾವತಿಯಾಗಿದೆ. 2025 ರಲ್ಲಿ 3708 ರೈತರು ವಿಮೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇನ್ನು ಹೆಚ್ವಿನ ಸಂಖ್ಯೆಯಲ್ಲಿ ರೈತರು ನೊಂದಾಯಿಸಿಕೊಳ್ಳುವಂತೆ ಪ್ರಚಾರ ನೀಡಿ ಎಂದರು.

ಬೆಳೆ ವಿಮಾ ಯೋಜನೆ ಕುರಿತು ಇಲಾಖಾ ರೈತ ಸಂಜೀವಿನಿ ವಾಹನಗಳಲ್ಲಿ, ಆಟೋರಿಕ್ಷಾಗಳ ಮೂಲಕ, ಕಸ ವಿಲೇವಾರಿ ವಾಹನ, KSRTC ಬಸ್ ನಿಲ್ದಾಣಗಳಲ್ಲಿ ಜಿಂಗಲ್ಸ್ ಅಳವಡಿಸಲಾಗಿದ್ದು, ಹಾಲಿನ ಡೈರಿ, ಸೊಸೈಟಿ, ಸಂತೆಗಳಲ್ಲಿ ಹಾಗೂ ಹೆಚ್ಚಿನ ರೈತರು ಸೇರುವ ಸ್ಥಳಗಳಲ್ಲಿ ನೇರವಾಗಿ ಸಂಪರ್ಕ ಮಾಡಿ ವಿಮಾ ನೊಂದಣಿ ಬಗ್ಗೆ ಮಾಹಿತಿ ನೀಡಿ ಎಂದರು.

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ (ಪಿ. ಎಂ. ಎಫ್. ಎಂ.ಇ) ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆವಿಗೆ 258 ರೈತ ಉದ್ದಿಮೆದಾರರಿಗೆ ಒಟ್ಟಾರೆ 65.45 ಕೋಟಿ ರೂಗಳಷ್ಟು ಸಾಲ ಹಾಗೂ 21.7 ಕೋಟಿ ರೂಗಳಷ್ಟು ಸಹಾಯಧನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಪಿ. ಎಂ. ಎಫ್. ಎಂ.ಇ ಯೋಜನೆಗೆ ಸದರಿ ಸಾಲಿನಲ್ಲಿ 250 ಗುರಿ ನಿಗದಿಯಾಗಿದ್ದು, ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ತೋಟಗಾರಿಕೆ, ಮೀನುಗಾರಿಕೆ ಹಾಗೂ ಕೃಷಿ ಇಲಾಖೆಗಳು ಒಟ್ಟಿಗೆ ಸಭೆ ನಡೆಸಿ ಹೆಚ್ಚಿನ ಬೇಡಿಕೆ ಇರುವ ಕ್ಷೇತ್ರದಲ್ಲಿ ಯೋಜನೆ ಸಿದ್ಧಪಡಿಸಿ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ, ಆಹಾರ ಸಂಸ್ಕರಣೆಗೆ ಸಂಬಂದಿಸಿದಂತೆ ಎನ್.ಆರ್.ಎಲ್. ಎಂ. ಸ್ವಸಹಾಯ ಸಂಘಗಳಿಗೆ ದೇಶಿ ಎಣ್ಣೆಯ ಗಾಣಗಳು, ಮದ್ದೂರು ಒಡೆ, ಚಿಪ್ಸ್ ತಯಾರಿಕೆ ಸೇರಿದಂತೆ ವಿವಿಧ ಘಟಕಗಳನ್ನು ಪ್ರಾರಂಭಿಸಬಹುದು. ಯೋಜನೆ ಸಿದ್ಧಪಡಿಸಿದರೆ ನುರಿತ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರ ಸಂಸದರಾದ ಹೆಚ್.ಡಿ ಕುಮಾರಸ್ವಾಮಿಯವರು ಜುಲೈ 4 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಸಲಿದ್ದು, ಈ ಸಂಬಂಧ ಅಧಿಕಾರಿಗಳು ಸಿದ್ಧಪಡಿಸಿರುವ ಅನುಪಾಲನ ವರದಿಯನ್ನು ಪರಿಶೀಲಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ರೂಪಶ್ರೀ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

5 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

6 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

10 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

12 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

13 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

14 hours ago