ಮಂಡ್ಯ: ಜಿಲ್ಲೆಯಲ್ಲಿ ಜೂನ್ 15 ರೊಳಗಾಗಿ ನಿಗದಿಪಡಿಸಿದ 85 ಕರೆಗಳ ಒತ್ತುವರಿಗಳನ್ನು ತೆರವುಗೊಳಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಸಭೆ ನಡೆಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ 35 ಕೆರೆ, ಸಣ್ಣ ನೀರಾವರಿ ಇಲಾಖೆಯ 2 ಕೆರೆ, ಹೇಮಾವತಿ ಎಡದಂಡೆ ನಾಲಾ ವಿಭಾಗದ 33ಕೆರೆ, ಕಾವೇರಿ ನೀರಾವರಿ ನಿಗಮ ನಿಯಮಿತದ 15 ಕೆರೆಗಳು ಸೇರಿದಂತೆ ಒಟ್ಟು 85 ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 962 ಕೆರೆಗಳಿವೆ. ಭೂ ದಾಖಲೆಗಳ ಇಲಾಖೆಯ ಸಹಯೋಗದೊಂದಿಗೆ ಕೆರೆಗಳನ್ನು ಅಳತೆ ಮಾಡಲಾಗಿದೆ. ಇದರಲ್ಲಿ 448 ಕೆರೆಗಳಲ್ಲಿ ಒತ್ತುವರಿ ಕಂಡುಬಂದಿದ್ದು, 200 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ 248 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕಿದ್ದು, ಜೂನ್ 15 ರೊಳಗಾಗಿ ನಿಗದಿಪಡಿಸಿರುವ 85 ಕೆರೆಗಳ ಒತ್ತುವರಿಯನ್ನು ತಹಶೀಲ್ದಾರ್, ಪೊಲೀಸ್ ಇಲಾಖೆಯ ಸಹಾಯ ಪಡೆದು ತೆರವುಗೊಳಿಸಿ ವರದಿ ನೀಡಬೇಕು ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಹೆಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸಬೇಕು, ನಿಯಮಿತವಾಗಿ ಕೆರೆಗಳ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿರುವ ಕೆರೆಗಳನ್ನು ಅಳತೆ ಮಾಡಿಸಿ ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಮೇ 13 ರ ಸಂಜೆ 5 ಗಂಟೆಯೊಳಗಾಗಿ ಕಡತ ಸಲ್ಲಿಕೆಯಾಗದಿದ್ದರೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೆರೆಗಳನ್ನು ಸರಿಯಾಗಿ ಸಂರಕ್ಷಣೆ ಮಾಡದಿದ್ದರೆ ಮಳೆ ನೀರನ್ನು ಸಂಗ್ರಹಿಸಲಾಗದೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಕೆರೆಯ ಸುತ್ತ 30 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಡಿ.ಡಿ.ಎಲ್ಆರ್ ಉಮೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…