ಮಂಡ್ಯ

ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ

ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಫ್ರೌಡಶಾಲೆಗಳಿಗೆ ಭೇಟಿ ನೀಡಿ ಬಿಸಿ ಊಟ ಯೋಜನೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಶುಕ್ರವಾರ ಚಂದಗಾಲು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಅವರು ಎರಡೂ ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಈಗಾಗಲೇ ಶೌಚಾಲಯ ನಿರ್ಮಾಣ ಮಾಡಲು ಅನುಮೋದನೆಯಾಗಿದ್ದರೂ ಸಹ ಕಾಮಗಾರಿ ಪ್ರಾರಂಭಿಸಿಲ್ಲದಿದ್ದರಿಂದ, ಸಂಬಂಧಪಟ್ಟ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ದೂರವಾಣಿ ಕರೆ ಮಾಡಿ ತ್ವರಿತವಾಗಿ ಶೌಚಾಲಯ ನಿರ್ಮಾಣ ಕಾಮಗಾರಿ ಮಾಡುವಂತೆ ಸೂಚಿಸಿದರು.

ಮಕ್ಕಳು ಕಡ್ಡಾಯವಾಗಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳಿ, ಗೈರು ಹಾಜರಾದ ಮಕ್ಕಳ ಪೋಷಕರಿಗೆ ಕರೆದು ಮಾತನಾಡಿ ಆ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಳೆದ ಸಾಲಿಗಿಂತ ಉತ್ತಮ ಪ್ರಗತಿ ಸಾಧಿಸಿ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಬಿಸಿ ಊಟ ಯೋಜನೆಯಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಮಕ್ಕಳ ಅಭಿಪ್ರಾಯ ಪಡೆದರು. ಮೊಟ್ಟೆ ವಿತರಣೆ ಹಾಗೂ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆ ಹಣ್ಣು ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದರು. ಉತ್ತಮ ಗುಣಮಟ್ಟ ಮೊಟ್ಟೆಗಳನ್ನು ವಿತರಿಸುವಂತೆ ಶಾಲೆಯ ಮುಖ್ಯೋಪದ್ಯಾಯರಿಗೆ ಸೂಚಿಸಿದರು.

ದಾನಿಗಳ ನೆರವಿನಿಂದ ಶಾಲೆಯ ಅಭಿವೃದ್ಧಿ: ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಯನ್ನು ಸಹ ಪ್ರಾರಂಭಿಸಲಾಗಿದೆ ಎಂದರು.

ಬಸ್ ಸಂಚಾರದ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ: ಚಂದಗಾಲು ಗ್ರಾಮದ ಶಾಲೆಗಳಿಗೆ ಅಕ್ಕ ಪಕ್ಕದ ಗ್ರಾಮಗಳಾದ ಪುಟ್ಟಿಕೊಪ್ಪಲು, ಬಿಳಿಗುಲಿ, ಉಪ್ಪಾರಕೊಪ್ಪಲು ಗ್ರಾಮಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದು, ಶಾಲೆ ಆರಂಭವಾಗುವ ಮತ್ತು ಮುಕ್ತಾಯ ಸಮಯಕ್ಕಿಂತ ವಿಳಂಬವಾಗಿ ಬರುತ್ತಿದೆ. ಇದರಿಂದ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ಬರಲು ಆಗುತ್ತಿಲ್ಲ ಹಾಗೂ ಶಾಲೆ ಬಿಟ್ಟ ನಂತರ ಒಂದು ಗಂಟೆ ಕಾಯುವ ಸ್ಥಿತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು. ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿ ಸಮಸ್ಯೆ ಸರಿಪಡಿಸಲು ತಿಳಿಸಿದರು.

1098 ಸಹಾಯವಾಣಿ ಬಗ್ಗೆ ಅರಿವು ಮೂಡಿಸಲು ಸಲಹೆ
ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಾಲ್ಯ ವಿವಾಹ ತಡೆಗಟ್ಟುವ ಸಲುವಾಗಿ ತೆರೆಯಲಾಗಿರುವ 1098 ಸಹಾಯವಾಣಿ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವಂತೆ ಹಾಗೂ ಮಕ್ಕಳಿಗೆ ಆತ್ಮ ವಿಶ್ವಾಸ ಹೆಚ್ಚಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಾಲೆಯ ಮುಖ್ಯೋಪದ್ಯಾಯರಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಚಂದಗಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿದ್ಯಾ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಾಗೇಶ್, ಶಾಲೆಯ ಮುಖ್ಯೋಪದ್ಯಾಯರಾದ ಜಯಶೀಲಾ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

11 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

11 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

16 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

18 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

20 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

20 hours ago