ಮಂಡ್ಯ

ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ

ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಫ್ರೌಡಶಾಲೆಗಳಿಗೆ ಭೇಟಿ ನೀಡಿ ಬಿಸಿ ಊಟ ಯೋಜನೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಶುಕ್ರವಾರ ಚಂದಗಾಲು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಅವರು ಎರಡೂ ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಈಗಾಗಲೇ ಶೌಚಾಲಯ ನಿರ್ಮಾಣ ಮಾಡಲು ಅನುಮೋದನೆಯಾಗಿದ್ದರೂ ಸಹ ಕಾಮಗಾರಿ ಪ್ರಾರಂಭಿಸಿಲ್ಲದಿದ್ದರಿಂದ, ಸಂಬಂಧಪಟ್ಟ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ದೂರವಾಣಿ ಕರೆ ಮಾಡಿ ತ್ವರಿತವಾಗಿ ಶೌಚಾಲಯ ನಿರ್ಮಾಣ ಕಾಮಗಾರಿ ಮಾಡುವಂತೆ ಸೂಚಿಸಿದರು.

ಮಕ್ಕಳು ಕಡ್ಡಾಯವಾಗಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳಿ, ಗೈರು ಹಾಜರಾದ ಮಕ್ಕಳ ಪೋಷಕರಿಗೆ ಕರೆದು ಮಾತನಾಡಿ ಆ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಳೆದ ಸಾಲಿಗಿಂತ ಉತ್ತಮ ಪ್ರಗತಿ ಸಾಧಿಸಿ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಬಿಸಿ ಊಟ ಯೋಜನೆಯಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಮಕ್ಕಳ ಅಭಿಪ್ರಾಯ ಪಡೆದರು. ಮೊಟ್ಟೆ ವಿತರಣೆ ಹಾಗೂ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆ ಹಣ್ಣು ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದರು. ಉತ್ತಮ ಗುಣಮಟ್ಟ ಮೊಟ್ಟೆಗಳನ್ನು ವಿತರಿಸುವಂತೆ ಶಾಲೆಯ ಮುಖ್ಯೋಪದ್ಯಾಯರಿಗೆ ಸೂಚಿಸಿದರು.

ದಾನಿಗಳ ನೆರವಿನಿಂದ ಶಾಲೆಯ ಅಭಿವೃದ್ಧಿ: ಚಂದಗಾಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಯನ್ನು ಸಹ ಪ್ರಾರಂಭಿಸಲಾಗಿದೆ ಎಂದರು.

ಬಸ್ ಸಂಚಾರದ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ: ಚಂದಗಾಲು ಗ್ರಾಮದ ಶಾಲೆಗಳಿಗೆ ಅಕ್ಕ ಪಕ್ಕದ ಗ್ರಾಮಗಳಾದ ಪುಟ್ಟಿಕೊಪ್ಪಲು, ಬಿಳಿಗುಲಿ, ಉಪ್ಪಾರಕೊಪ್ಪಲು ಗ್ರಾಮಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದು, ಶಾಲೆ ಆರಂಭವಾಗುವ ಮತ್ತು ಮುಕ್ತಾಯ ಸಮಯಕ್ಕಿಂತ ವಿಳಂಬವಾಗಿ ಬರುತ್ತಿದೆ. ಇದರಿಂದ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ಬರಲು ಆಗುತ್ತಿಲ್ಲ ಹಾಗೂ ಶಾಲೆ ಬಿಟ್ಟ ನಂತರ ಒಂದು ಗಂಟೆ ಕಾಯುವ ಸ್ಥಿತಿ ಎದುರಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು. ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿ ಸಮಸ್ಯೆ ಸರಿಪಡಿಸಲು ತಿಳಿಸಿದರು.

1098 ಸಹಾಯವಾಣಿ ಬಗ್ಗೆ ಅರಿವು ಮೂಡಿಸಲು ಸಲಹೆ
ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಾಲ್ಯ ವಿವಾಹ ತಡೆಗಟ್ಟುವ ಸಲುವಾಗಿ ತೆರೆಯಲಾಗಿರುವ 1098 ಸಹಾಯವಾಣಿ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವಂತೆ ಹಾಗೂ ಮಕ್ಕಳಿಗೆ ಆತ್ಮ ವಿಶ್ವಾಸ ಹೆಚ್ಚಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಾಲೆಯ ಮುಖ್ಯೋಪದ್ಯಾಯರಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಚಂದಗಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿದ್ಯಾ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಾಗೇಶ್, ಶಾಲೆಯ ಮುಖ್ಯೋಪದ್ಯಾಯರಾದ ಜಯಶೀಲಾ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago