ಮಂಡ್ಯ

ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದ ಜಿ.ಪಂ ಸಿಇಒ

ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು.

ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿ ಮಡಿ ತಯಾರಿಕಾ ಘಟಕದಲ್ಲಿ ಏರ್ಪಡಿಸಲಾಗಿದ್ದ ಯಾಂತ್ರೀಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದ ಅವರು, ಯಾಂತ್ರೀಕೃತ ವಿಧಾನದ ಮೂಲಕ ಮಹಿಳೆಯರು ಕೂಡ ಭತ್ತ ನಾಟಿ ಮಾಡಬಹುದು ಎಂಬ ವಿಶ್ವಾಸ ತುಂಬಲು ಸ್ವತಃ ಅವರೇ ನಾಟಿ ಪ್ರಕ್ರಿಯೆಯಲ್ಲಿ ತೊಡಗಿರುವುದಾಗಿ ತಿಳಿಸಿದರು.

ಭತ್ತ ನಾಟಿಗೆ ಯಂತ್ರ ಬಳಸಲು ಮಹಿಳೆಯರಿಗೆ ಸಾಧ್ಯವಿಲ್ಲ. ಅವರಿಂದ ಯಂತ್ರವನ್ನು ನಿರ್ವಹಣೆ ಮಾಡಲು ಅಸಾಧ್ಯ ಎಂಬ ಕಲ್ಪನೆಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಮಹಿಳೆಯರು ಕೂಡ ಯಂತ್ರದ ಮೂಲಕ ಭತ್ತ ನಾಟಿ ಮಾಡಬಹುದು ಹಾಗೂ ಯಂತ್ರವನ್ನು ನಿರ್ವಹಣೆ ಮಾಡಬಹುದು ಎಂದು ತರಬೇತಿಗೆ ಬಂದಿದ್ದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಭತ್ತ ನಾಟಿಗೆ ಕೃಷಿ ಕೂಲಿಕಾರರು ಸರಿಯಾದ ಸಮಯದಲ್ಲಿ ದೊರೆಯುತ್ತಿಲ್ಲ. ಇದರಿಂದ ಸರಿಯಾದ ಸಮಯದಲ್ಲಿ ನಾಟಿ ಮಾಡಲು ಸಾಧ್ಯವಾಗದೇ ಇಳುವರಿ ಕಡಿಮೆಯಾಗುತ್ತಿದೆ. ಯಾಂತ್ರೀಕೃತ ವಿಧಾನದ ಭತ್ತ ನಾಟಿಯಿಂದ ಭತ್ತ ನಾಟಿಯ ವೆಚ್ಚ ತಗ್ಗಿಸಬಹುದಾಗಿದೆ ಹಾಗೂ ಕಡಿಮೆ ಸಮಯದಲ್ಲಿ ನಾಟಿ ಮಾಡಬಹುದಾಗಿದೆ ಎಂದು ತಿಳಿಸಿದರು.

ಒಂಟಿ ಕಣ್ಣಿನ ಕಬ್ಬಿನ ಸಸಿ ಮಡಿ ತರಬೇತಿ
ಕೃಷಿ ಇಲಾಖೆಯ ಸಮನ್ವಯದೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ನೋಂದಾಯಿತ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಒಂಟಿ ಕಣ್ಣಿನ ಕಬ್ಬಿನ ಸಸಿ ಮಡಿ ತಯಾರಿಸುವುದು ಹಾಗೂ ಯಂತ್ರ ನಾಟಿ ಸಸಿಮಡಿ ತಯಾರಿಸುವ ಕುರಿತಂತೆ ಒಂದು ದಿನದ ತರಬೇತಿಯನ್ನು ಏರ್ಪಡಿಸಲಾಗಿತ್ತು.

ಯಾಂತ್ರೀಕೃತ ವಿಧಾನದ ಭತ್ತ ನಾಟಿಗೆ ಸಸಿಮಡಿಗಳನ್ನು ತಯಾರಿಸುವ ವಿಧಾನದ ಬಗ್ಗೆ ಮಹಿಳಾ ಸ್ವ-ಸಹಾಯ ಸಂಘಗಳಿಗೆ ತರಬೇತಿ ನೀಡಿ, ಅವರಿಂದ ರೈತರಿಗೆ ಉತ್ತಮ ಗುಣಮಟ್ಟದ ಭತ್ತದ ಸಸಿಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ತರಬೇತಿ ಏರ್ಪಡಿಸಲಾಗಿದೆ ಎಂದು ಕೆ.ಆರ್.ನಂದಿನಿ ಹೇಳಿದರು.

ಈ ಸಂದರ್ಭದಲ್ಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಸಹಾಯಕ ಕೃಷಿ ನಿರ್ದೇಶಕ ಶ್ರೀಹರ್ಷ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

39 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

48 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

52 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

57 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

1 hour ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

1 hour ago