ಮಂಡ್ಯ

ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದ ಜಿ.ಪಂ ಸಿಇಒ

ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು.

ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿ ಮಡಿ ತಯಾರಿಕಾ ಘಟಕದಲ್ಲಿ ಏರ್ಪಡಿಸಲಾಗಿದ್ದ ಯಾಂತ್ರೀಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದ ಅವರು, ಯಾಂತ್ರೀಕೃತ ವಿಧಾನದ ಮೂಲಕ ಮಹಿಳೆಯರು ಕೂಡ ಭತ್ತ ನಾಟಿ ಮಾಡಬಹುದು ಎಂಬ ವಿಶ್ವಾಸ ತುಂಬಲು ಸ್ವತಃ ಅವರೇ ನಾಟಿ ಪ್ರಕ್ರಿಯೆಯಲ್ಲಿ ತೊಡಗಿರುವುದಾಗಿ ತಿಳಿಸಿದರು.

ಭತ್ತ ನಾಟಿಗೆ ಯಂತ್ರ ಬಳಸಲು ಮಹಿಳೆಯರಿಗೆ ಸಾಧ್ಯವಿಲ್ಲ. ಅವರಿಂದ ಯಂತ್ರವನ್ನು ನಿರ್ವಹಣೆ ಮಾಡಲು ಅಸಾಧ್ಯ ಎಂಬ ಕಲ್ಪನೆಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಮಹಿಳೆಯರು ಕೂಡ ಯಂತ್ರದ ಮೂಲಕ ಭತ್ತ ನಾಟಿ ಮಾಡಬಹುದು ಹಾಗೂ ಯಂತ್ರವನ್ನು ನಿರ್ವಹಣೆ ಮಾಡಬಹುದು ಎಂದು ತರಬೇತಿಗೆ ಬಂದಿದ್ದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಭತ್ತ ನಾಟಿಗೆ ಕೃಷಿ ಕೂಲಿಕಾರರು ಸರಿಯಾದ ಸಮಯದಲ್ಲಿ ದೊರೆಯುತ್ತಿಲ್ಲ. ಇದರಿಂದ ಸರಿಯಾದ ಸಮಯದಲ್ಲಿ ನಾಟಿ ಮಾಡಲು ಸಾಧ್ಯವಾಗದೇ ಇಳುವರಿ ಕಡಿಮೆಯಾಗುತ್ತಿದೆ. ಯಾಂತ್ರೀಕೃತ ವಿಧಾನದ ಭತ್ತ ನಾಟಿಯಿಂದ ಭತ್ತ ನಾಟಿಯ ವೆಚ್ಚ ತಗ್ಗಿಸಬಹುದಾಗಿದೆ ಹಾಗೂ ಕಡಿಮೆ ಸಮಯದಲ್ಲಿ ನಾಟಿ ಮಾಡಬಹುದಾಗಿದೆ ಎಂದು ತಿಳಿಸಿದರು.

ಒಂಟಿ ಕಣ್ಣಿನ ಕಬ್ಬಿನ ಸಸಿ ಮಡಿ ತರಬೇತಿ
ಕೃಷಿ ಇಲಾಖೆಯ ಸಮನ್ವಯದೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ನೋಂದಾಯಿತ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಒಂಟಿ ಕಣ್ಣಿನ ಕಬ್ಬಿನ ಸಸಿ ಮಡಿ ತಯಾರಿಸುವುದು ಹಾಗೂ ಯಂತ್ರ ನಾಟಿ ಸಸಿಮಡಿ ತಯಾರಿಸುವ ಕುರಿತಂತೆ ಒಂದು ದಿನದ ತರಬೇತಿಯನ್ನು ಏರ್ಪಡಿಸಲಾಗಿತ್ತು.

ಯಾಂತ್ರೀಕೃತ ವಿಧಾನದ ಭತ್ತ ನಾಟಿಗೆ ಸಸಿಮಡಿಗಳನ್ನು ತಯಾರಿಸುವ ವಿಧಾನದ ಬಗ್ಗೆ ಮಹಿಳಾ ಸ್ವ-ಸಹಾಯ ಸಂಘಗಳಿಗೆ ತರಬೇತಿ ನೀಡಿ, ಅವರಿಂದ ರೈತರಿಗೆ ಉತ್ತಮ ಗುಣಮಟ್ಟದ ಭತ್ತದ ಸಸಿಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ತರಬೇತಿ ಏರ್ಪಡಿಸಲಾಗಿದೆ ಎಂದು ಕೆ.ಆರ್.ನಂದಿನಿ ಹೇಳಿದರು.

ಈ ಸಂದರ್ಭದಲ್ಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಸಹಾಯಕ ಕೃಷಿ ನಿರ್ದೇಶಕ ಶ್ರೀಹರ್ಷ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

2 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

3 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

4 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

5 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

6 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

7 hours ago