ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹ, ಕಾವೇರಿ ನದಿಗೆ ನಾವೆಲ್ಲಾ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೇವು. ಆದರೂ ಶಕ್ತಿ ಮೀರಿ ರೈತರನ್ನು ಕಾಪಾಡುವ ಕೆಲಸ ಮಾಡಿದ್ದೇವೆ. ಕಳೆದ ವರ್ಷ ಸಾಕಷ್ಟು ಬರಗಾಲ ಇತ್ತು ಈಗ ಕಾವೇರಿ ತಾಯಿಯ ಕೃಪಡೆ ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಅಲ್ಲದೆ ೪೦ ಟಿಎಂಸಿ ನೀರು ತಮಿಳುನಾಡಿಗೆ ಬಿಡಬೇಕಿತ್ತು. ಸದ್ಯ ೨೦ ಟಿಎಂಸಿ ಬಿಡಿ ಎಂದು ಆದೇಶ ಆಗಿತ್ತು. ಆದರೆ ನಾವು ನಿರ್ಧಾರ ಮಾಡಿ ನೀರು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದಾರೆ ಅಂತಾ ಹೇಳ್ತಾರೆ. ಆದರೆ ನಾವು ಯಾವುದೇ ನೀರು ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದು ಹೋಗಿದೆ. ಇನ್ನು ೧೦ ಟಿಎಂಸಿ ನೀರು ಹರಿದು ಹೋದ್ರೆ ಈ ವರ್ಷದ ಗಡುವು ತೀರಲಿದೆ. ಸದ್ಯ ಡ್ಯಾಂ ನಿಂದ ೫೦ ಸಾವಿರ ಕ್ಯೂಸೆಕ್ ನೀರು ಹೋಗ್ತಿದೆ. ವರುಣನ ಕೃಪೆಯಿಂದ ಆದೇಶ ಪಾಲನೆ ಮಾಡಿದ್ದೇವೆ. ೧೪೫೫ ಕೆರೆಗಳು ಕಾವೇರಿ ಕೊಳ್ಳದಲ್ಲಿದೆ. ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…