ಮಂಡ್ಯ

ತಮಿಳುನಾಡಿಗೆ ನಾವು ಯಾವುದೇ ನೀರು ಬಿಟ್ಟಿಲ್ಲ, ಡ್ಯಾಂ ತುಂಬಿ ೩೦ಟಿಎಂಸಿ ನೀರು ಹರಿದು ಹೋಗಿದೆ- ಡಿಕೆಶಿ

ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು.

ಕೆಆರ್‌ ಎಸ್‌ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹ, ಕಾವೇರಿ ನದಿಗೆ ನಾವೆಲ್ಲಾ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೇವು. ಆದರೂ ಶಕ್ತಿ ಮೀರಿ ರೈತರನ್ನು ಕಾಪಾಡುವ ಕೆಲಸ ಮಾಡಿದ್ದೇವೆ. ಕಳೆದ ವರ್ಷ ಸಾಕಷ್ಟು ಬರಗಾಲ ಇತ್ತು ಈಗ ಕಾವೇರಿ ತಾಯಿಯ ಕೃಪಡೆ ನಮಗೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಅಲ್ಲದೆ ೪೦ ಟಿಎಂಸಿ ನೀರು ತಮಿಳುನಾಡಿಗೆ ಬಿಡಬೇಕಿತ್ತು. ಸದ್ಯ ೨೦ ಟಿಎಂಸಿ ಬಿಡಿ ಎಂದು ಆದೇಶ ಆಗಿತ್ತು. ಆದರೆ ನಾವು ನಿರ್ಧಾರ ಮಾಡಿ ನೀರು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದಾರೆ ಅಂತಾ ಹೇಳ್ತಾರೆ. ಆದರೆ ನಾವು ಯಾವುದೇ ನೀರು ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದು ಹೋಗಿದೆ. ಇನ್ನು ೧೦ ಟಿಎಂಸಿ ನೀರು ಹರಿದು ಹೋದ್ರೆ ಈ ವರ್ಷದ ಗಡುವು ತೀರಲಿದೆ. ಸದ್ಯ ಡ್ಯಾಂ ನಿಂದ ೫೦ ಸಾವಿರ ಕ್ಯೂಸೆಕ್‌ ನೀರು ಹೋಗ್ತಿದೆ. ವರುಣನ ಕೃಪೆಯಿಂದ ಆದೇಶ ಪಾಲನೆ ಮಾಡಿದ್ದೇವೆ. ೧೪೫೫  ಕೆರೆಗಳು ಕಾವೇರಿ ಕೊಳ್ಳದಲ್ಲಿದೆ. ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago