ಮಂಡ್ಯ

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಬೂದನೂರು ಉತ್ಸವದ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಇಡೀ ರಾಜ್ಯ ಸಂಚಾರ ಮಾಡಿ ಪಕ್ಷವನ್ನು ಬಲಪಡಿಸಿ ೧೩೬ ಸ್ಥಾನ ಬರಲು ಬಹಳ ಶ್ರಮಿಸಿದ್ದಾರೆ. ಅವರ ಶ್ರಮದ ಬೆವರಿಗೆ ತಕ್ಕ ಫಲ ಸಿಗಲೇ ಬೇಕು. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಯತೀಂದ್ರ ಪವರ್‌ಫುಲ್ ಹೈಕಮಾಂಡ್
ಯತೀಂದ್ರ ಅವರು ಕಾಂಗ್ರೆಸ್ ಪಕ್ಷದ ಪವರ್‌ಫುಲ್ ಹೈಕಮಾಂಡ್. ಅವರು ಹೇಳಿದಂತೆ ಎಲ್ಲವೂ ನಡೆಯುತ್ತದೆ. ಅವರು ಹೈಕಮಾಂಡ್ ಆಗಿರುವುದರಿಂದ ಅವರಿಗೆ ನೋಟಿಸ್ ಕೊಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಯಾರೂ ಮಾತನಾಡಬಾರದು ಎಂದು ದೆಹಲಿಯಲ್ಲಿರುವ ನಮ್ಮ ಹೈಕಮಾಂಡ್ ಸೂಚನೆ ನೀಡಿದೆ. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಾನು ಮಾತನಾಡಲ್ಲ, ಒಟ್ಟಿನಲ್ಲಿ ಅತೀ ಶೀಘ್ರದಲ್ಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.

ಅಭಿವೃದ್ಧಿ ಕಣ್ಣ ಮುಂದೆಯೇ ಇದೆ
ಮಂಡ್ಯ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳು ಜನರ ಕಣ್ಣ ಮುಂದೆಯೇ ಇವೆ. ಕಳೆದ ೮೦ ವರ್ಷಗಳಿಂದ ನಡೆಯದಂತಹ ಕೆಲಸಗಳು ನಮ್ಮ ಸರ್ಕಾರದಲ್ಲಿ ನಡೆದಿವೆ. ಆಡಿಕೊಳ್ಳುವವರ ಕಣ್ಣಿಗೆ ನಡೆದಿರುವ ಅಭಿವೃದ್ಧಿ ಕೆಲಸಗಳು ಕಾಣಲಿಲ್ಲ ಎಂದರೆ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಳೆದ ಎರಡೂವರೆ ವರ್ಷದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾವೇರಿ ನೀರಾವರಿ ನಿಗಮ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಂದ ಒಂದು ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕೆಲಸಗಳು ನಡೆದಿವೆ. ಹೊಸಬೂದನೂರು ಗ್ರಾಮದ ಕೆರೆ ಅಭಿವೃದ್ಧಿಗೆ ೫ ಕೋಟಿ ಸೇರಿದಂತೆ ೧೦ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಹೇಳಿದರು.

ಎಚ್‌ಡಿಕೆ ನುಡಿದಂತೆ ನಡೆಯಲಿ:
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸೆಮಿಕಂಡಕ್ಟರ್ (ಕೈಗಾರಿಕಾ ವಲಯ)ಗೆ ೧೦೦ ಎಕರೆ ಭೂಮಿ ಕೇಳಿದ್ದರು. ಅದರಂತೆ ಮಂಡ್ಯ ತಾಲ್ಲೂಕಿನ ಬಸರಾಳು ಸಮೀಪ ೧೦೫ ಎಕರೆ ಭೂಮಿಯನ್ನು ನೀಡಲಾಗಿದ್ದು, ಅವರು ನುಡಿದಂತೆ ನಡೆದುಕೊಳ್ಳಬೆಕು ಎಂದು ಹೇಳಿದರು.

ಕೈಗಾರಿಕೆ ಬದಲು ಈಗ ಎಆರ್‌ಎಐ ಸ್ಥಾಪಿಸುವುದಾಗಿ ಹೇಳಿದ್ದಾರೆ. ಒಟ್ಟಿನಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಹೊಂದಬೇಕು ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕೆಂಬುದು ನನ್ನ ಬಯಕೆ. ಅಽಕಾರ ಬರುತ್ತೆ ಹೋಗುತ್ತದೆ. ನಾವು ಮಾಡುವ ಒಳ್ಳೆಯ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಹಾಗಾಗಿ ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಕುಮಾರಸ್ವಾಮಿ ಅವರು ಕೈಗಾರಿಕೆಯನ್ನಾದರೂ ತರಲಿ, ಎಆರ್‌ಎಐಯನ್ನಾದರೂ ತರಲಿ. ಒಟ್ಟಿನಲ್ಲಿ ನಮ್ಮ ಯುವಜನತೆಗೆ ಉದ್ಯೋಗ ಕೊಡಲಿ ಎಂದರು.

ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಒಳ್ಳೆಯ ಕಾರ್ಖಾನೆಗಳನ್ನು ತರುವ ಶಕ್ತಿ ಇದೆ. ಈ ಹಿನ್ನೆಲೆಯಲ್ಲಿ ಅವರ ಜತೆ ನಾನೂ ಸಹ ಕೈಜೋಡಿಸುತ್ತೇನೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago