ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ 6 ಕ್ಷೇತ್ರವನ್ನು ಗೆದ್ದು ಬೀಗಿದ್ದ ಕಾಂಗ್ರೆಸ್, ಇದೀಗ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡುತ್ತಿದೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ, ಜಿಲ್ಲಾ ವ್ಯಾಪ್ತಿಯ ಎಂಟು ಮಂದಿ ಕೈ ಶಾಸಕರು ಸಾಥ್ ನೀಡಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಇದು ಅವರು ಬದುಕಿದ್ದು ಸತ್ತಂತೆ. ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್ಗಾಗಿ ಕಾದು ಕುಳಿತಿದ್ದರು, ಇದೀಗ ಗೋವಿಂದ ಎಂದು ಲೇವಡಿ ಮಾಡಿದರು.
ಮಂಡ್ಯದ ಗೌಡ್ಕೆ, ಸ್ವಾಭಿಮಾನ ಹೊರಗಿನವರಿಗೆ ಕೊಟ್ಟಿರುವ ಇತಿಹಾಸವಿಲ್ಲ. ಎಸ್.ಎಂ ಕೃಷ್ಣ, ಕೆ.ವಿ ಶಂಕರೇಗೌಡ, ಜಿ.ಮಾದೇಗೌಡ, ಅಂಬರೀಶ್ ಹಾದಿಯಾಗಿ ಜಿಲ್ಲೆಯರನ್ನೇ ಆರಿಸಿ ಸಂಸತ್ಗೆ ಕಳುಹಿಸಿದ್ದೀರಿ, ಇಂದು ಕೂಡ ನೀವು ನಿಮ್ಮ ಗೌಡ್ಕೆಯನ್ನು ನಿಮ್ಮ ಜನರ ಕೈಗೆ ಕೊಡಿ ಎಂದಿದ್ದಾರೆ.
ಸ್ವಾರ್ಥದ ಮಾತಿಗೆ ಮಂಡ್ಯ ಜನ ಮರುಳಾಗಬೇಡಿ, ಸ್ಟಾರ್ ಚಂದ್ರು ಅವರ ನಾಮಪತ್ರ ಮಂಡ್ಯ ಜನರ ಸ್ವಾಭಿಮಾನದ ನಾಮಪತ್ರವಾಗಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ 9 ಮಂದಿ ಒಕ್ಕಲಿಗರಿಗೆ ಲೋಕ ಟಿಕೆಟ್ ನೀಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 6 ಜನ ಕೈ ಶಾಸಕರನ್ನು ಆರಿಸುವ ಮೂಲಕ ನನಗೆ ಬೆಂಬಲ ನೀಡಿದ್ದೀರಿ, ನಿಮ್ಮ ಆಯ್ಕೆ ಉಸಿಯಾಗುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಆಸೆಯನ್ನು ಡಿಕೆಶಿ ಮಂಡ್ಯದ ಜನರಿಗೆ ತಿಳಿಸಿದ್ದಾರೆ.
ಮತದಾನ ಮಾಡುವ ದಿನ ನೀವು ಕಾಂಗ್ರೆಸ್ಗೆ ಮತ ನೀಡಿದ್ದ ಶಬ್ದ ಮೋದಿಗೆ ಕೇಳಬೇಕು. ಮಂಡ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ವೆಂಕಟರಮಣೇಗೌಡ ಮಾತ್ರವಲ್ಲ, ಡಿಕೆ ಶಿವಕುಮಾರ್ ಆದ ನಾನು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರೇ ಇಲ್ಲಿ ಸ್ಪರ್ಧಿಸಿದ್ದಾರೆ ಎಂದು ತಿಳಿದು ನೀವು ಕಾಂಗ್ರೆಸ್ಗೆ ಮತ ನೀಡಿ ಎಂದಿದ್ದಾರೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…