ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ 6 ಕ್ಷೇತ್ರವನ್ನು ಗೆದ್ದು ಬೀಗಿದ್ದ ಕಾಂಗ್ರೆಸ್, ಇದೀಗ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡುತ್ತಿದೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎನ್ ಚಲುವರಾಯಸ್ವಾಮಿ, ಜಿಲ್ಲಾ ವ್ಯಾಪ್ತಿಯ ಎಂಟು ಮಂದಿ ಕೈ ಶಾಸಕರು ಸಾಥ್ ನೀಡಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಇದು ಅವರು ಬದುಕಿದ್ದು ಸತ್ತಂತೆ. ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್ಗಾಗಿ ಕಾದು ಕುಳಿತಿದ್ದರು, ಇದೀಗ ಗೋವಿಂದ ಎಂದು ಲೇವಡಿ ಮಾಡಿದರು.
ಮಂಡ್ಯದ ಗೌಡ್ಕೆ, ಸ್ವಾಭಿಮಾನ ಹೊರಗಿನವರಿಗೆ ಕೊಟ್ಟಿರುವ ಇತಿಹಾಸವಿಲ್ಲ. ಎಸ್.ಎಂ ಕೃಷ್ಣ, ಕೆ.ವಿ ಶಂಕರೇಗೌಡ, ಜಿ.ಮಾದೇಗೌಡ, ಅಂಬರೀಶ್ ಹಾದಿಯಾಗಿ ಜಿಲ್ಲೆಯರನ್ನೇ ಆರಿಸಿ ಸಂಸತ್ಗೆ ಕಳುಹಿಸಿದ್ದೀರಿ, ಇಂದು ಕೂಡ ನೀವು ನಿಮ್ಮ ಗೌಡ್ಕೆಯನ್ನು ನಿಮ್ಮ ಜನರ ಕೈಗೆ ಕೊಡಿ ಎಂದಿದ್ದಾರೆ.
ಸ್ವಾರ್ಥದ ಮಾತಿಗೆ ಮಂಡ್ಯ ಜನ ಮರುಳಾಗಬೇಡಿ, ಸ್ಟಾರ್ ಚಂದ್ರು ಅವರ ನಾಮಪತ್ರ ಮಂಡ್ಯ ಜನರ ಸ್ವಾಭಿಮಾನದ ನಾಮಪತ್ರವಾಗಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ 9 ಮಂದಿ ಒಕ್ಕಲಿಗರಿಗೆ ಲೋಕ ಟಿಕೆಟ್ ನೀಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 6 ಜನ ಕೈ ಶಾಸಕರನ್ನು ಆರಿಸುವ ಮೂಲಕ ನನಗೆ ಬೆಂಬಲ ನೀಡಿದ್ದೀರಿ, ನಿಮ್ಮ ಆಯ್ಕೆ ಉಸಿಯಾಗುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಆಸೆಯನ್ನು ಡಿಕೆಶಿ ಮಂಡ್ಯದ ಜನರಿಗೆ ತಿಳಿಸಿದ್ದಾರೆ.
ಮತದಾನ ಮಾಡುವ ದಿನ ನೀವು ಕಾಂಗ್ರೆಸ್ಗೆ ಮತ ನೀಡಿದ್ದ ಶಬ್ದ ಮೋದಿಗೆ ಕೇಳಬೇಕು. ಮಂಡ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ವೆಂಕಟರಮಣೇಗೌಡ ಮಾತ್ರವಲ್ಲ, ಡಿಕೆ ಶಿವಕುಮಾರ್ ಆದ ನಾನು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರೇ ಇಲ್ಲಿ ಸ್ಪರ್ಧಿಸಿದ್ದಾರೆ ಎಂದು ತಿಳಿದು ನೀವು ಕಾಂಗ್ರೆಸ್ಗೆ ಮತ ನೀಡಿ ಎಂದಿದ್ದಾರೆ.
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…