ಮಂಡ್ಯ

ಮಂಡ್ಯದ ಗೌಡ್ಕೆ, ಸ್ವಾಭಿಮಾನ ಹೊರಗಿನವರಿಗೆ ಕೊಟ್ಟ ಇತಿಹಾಸವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ 6 ಕ್ಷೇತ್ರವನ್ನು ಗೆದ್ದು ಬೀಗಿದ್ದ ಕಾಂಗ್ರೆಸ್‌, ಇದೀಗ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡುತ್ತಿದೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌, ಸಚಿವ ಎನ್‌ ಚಲುವರಾಯಸ್ವಾಮಿ, ಜಿಲ್ಲಾ ವ್ಯಾಪ್ತಿಯ ಎಂಟು ಮಂದಿ ಕೈ ಶಾಸಕರು ಸಾಥ್‌ ನೀಡಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಎಚ್.​ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಇದು ಅವರು ಬದುಕಿದ್ದು ಸತ್ತಂತೆ. ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್​ಗಾಗಿ ಕಾದು ಕುಳಿತಿದ್ದರು, ಇದೀಗ ಗೋವಿಂದ ಎಂದು ಲೇವಡಿ ಮಾಡಿದರು.

ಮಂಡ್ಯದ ಗೌಡ್ಕೆ, ಸ್ವಾಭಿಮಾನ ಹೊರಗಿನವರಿಗೆ ಕೊಟ್ಟಿರುವ ಇತಿಹಾಸವಿಲ್ಲ. ಎಸ್‌.ಎಂ ಕೃಷ್ಣ, ಕೆ.ವಿ ಶಂಕರೇಗೌಡ, ಜಿ.ಮಾದೇಗೌಡ, ಅಂಬರೀಶ್‌ ಹಾದಿಯಾಗಿ ಜಿಲ್ಲೆಯರನ್ನೇ ಆರಿಸಿ ಸಂಸತ್‌ಗೆ ಕಳುಹಿಸಿದ್ದೀರಿ, ಇಂದು ಕೂಡ ನೀವು ನಿಮ್ಮ ಗೌಡ್ಕೆಯನ್ನು ನಿಮ್ಮ ಜನರ ಕೈಗೆ ಕೊಡಿ ಎಂದಿದ್ದಾರೆ.

ಸ್ವಾರ್ಥದ ಮಾತಿಗೆ ಮಂಡ್ಯ ಜನ ಮರುಳಾಗಬೇಡಿ, ಸ್ಟಾರ್‌ ಚಂದ್ರು ಅವರ ನಾಮಪತ್ರ ಮಂಡ್ಯ ಜನರ ಸ್ವಾಭಿಮಾನದ ನಾಮಪತ್ರವಾಗಿದೆ. ಕಾಂಗ್ರೆಸ್‌ ಕರ್ನಾಟಕದಲ್ಲಿ 9 ಮಂದಿ ಒಕ್ಕಲಿಗರಿಗೆ ಲೋಕ ಟಿಕೆಟ್‌ ನೀಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 6 ಜನ ಕೈ ಶಾಸಕರನ್ನು ಆರಿಸುವ ಮೂಲಕ ನನಗೆ ಬೆಂಬಲ ನೀಡಿದ್ದೀರಿ, ನಿಮ್ಮ ಆಯ್ಕೆ ಉಸಿಯಾಗುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಆಸೆಯನ್ನು ಡಿಕೆಶಿ ಮಂಡ್ಯದ ಜನರಿಗೆ ತಿಳಿಸಿದ್ದಾರೆ.

ಮತದಾನ ಮಾಡುವ ದಿನ ನೀವು ಕಾಂಗ್ರೆಸ್‌ಗೆ ಮತ ನೀಡಿದ್ದ ಶಬ್ದ ಮೋದಿಗೆ ಕೇಳಬೇಕು. ಮಂಡ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ವೆಂಕಟರಮಣೇಗೌಡ ಮಾತ್ರವಲ್ಲ, ಡಿಕೆ ಶಿವಕುಮಾರ್‌ ಆದ ನಾನು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರೇ ಇಲ್ಲಿ ಸ್ಪರ್ಧಿಸಿದ್ದಾರೆ ಎಂದು ತಿಳಿದು ನೀವು ಕಾಂಗ್ರೆಸ್‌ಗೆ ಮತ ನೀಡಿ ಎಂದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago