ಮಂಡ್ಯ

ಮಂಡ್ಯದ ಗೌಡ್ಕೆ, ಸ್ವಾಭಿಮಾನ ಹೊರಗಿನವರಿಗೆ ಕೊಟ್ಟ ಇತಿಹಾಸವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ 6 ಕ್ಷೇತ್ರವನ್ನು ಗೆದ್ದು ಬೀಗಿದ್ದ ಕಾಂಗ್ರೆಸ್‌, ಇದೀಗ ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡುತ್ತಿದೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌, ಸಚಿವ ಎನ್‌ ಚಲುವರಾಯಸ್ವಾಮಿ, ಜಿಲ್ಲಾ ವ್ಯಾಪ್ತಿಯ ಎಂಟು ಮಂದಿ ಕೈ ಶಾಸಕರು ಸಾಥ್‌ ನೀಡಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌, ಎಚ್.​ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಇದು ಅವರು ಬದುಕಿದ್ದು ಸತ್ತಂತೆ. ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್​ಗಾಗಿ ಕಾದು ಕುಳಿತಿದ್ದರು, ಇದೀಗ ಗೋವಿಂದ ಎಂದು ಲೇವಡಿ ಮಾಡಿದರು.

ಮಂಡ್ಯದ ಗೌಡ್ಕೆ, ಸ್ವಾಭಿಮಾನ ಹೊರಗಿನವರಿಗೆ ಕೊಟ್ಟಿರುವ ಇತಿಹಾಸವಿಲ್ಲ. ಎಸ್‌.ಎಂ ಕೃಷ್ಣ, ಕೆ.ವಿ ಶಂಕರೇಗೌಡ, ಜಿ.ಮಾದೇಗೌಡ, ಅಂಬರೀಶ್‌ ಹಾದಿಯಾಗಿ ಜಿಲ್ಲೆಯರನ್ನೇ ಆರಿಸಿ ಸಂಸತ್‌ಗೆ ಕಳುಹಿಸಿದ್ದೀರಿ, ಇಂದು ಕೂಡ ನೀವು ನಿಮ್ಮ ಗೌಡ್ಕೆಯನ್ನು ನಿಮ್ಮ ಜನರ ಕೈಗೆ ಕೊಡಿ ಎಂದಿದ್ದಾರೆ.

ಸ್ವಾರ್ಥದ ಮಾತಿಗೆ ಮಂಡ್ಯ ಜನ ಮರುಳಾಗಬೇಡಿ, ಸ್ಟಾರ್‌ ಚಂದ್ರು ಅವರ ನಾಮಪತ್ರ ಮಂಡ್ಯ ಜನರ ಸ್ವಾಭಿಮಾನದ ನಾಮಪತ್ರವಾಗಿದೆ. ಕಾಂಗ್ರೆಸ್‌ ಕರ್ನಾಟಕದಲ್ಲಿ 9 ಮಂದಿ ಒಕ್ಕಲಿಗರಿಗೆ ಲೋಕ ಟಿಕೆಟ್‌ ನೀಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 6 ಜನ ಕೈ ಶಾಸಕರನ್ನು ಆರಿಸುವ ಮೂಲಕ ನನಗೆ ಬೆಂಬಲ ನೀಡಿದ್ದೀರಿ, ನಿಮ್ಮ ಆಯ್ಕೆ ಉಸಿಯಾಗುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಆಸೆಯನ್ನು ಡಿಕೆಶಿ ಮಂಡ್ಯದ ಜನರಿಗೆ ತಿಳಿಸಿದ್ದಾರೆ.

ಮತದಾನ ಮಾಡುವ ದಿನ ನೀವು ಕಾಂಗ್ರೆಸ್‌ಗೆ ಮತ ನೀಡಿದ್ದ ಶಬ್ದ ಮೋದಿಗೆ ಕೇಳಬೇಕು. ಮಂಡ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ವೆಂಕಟರಮಣೇಗೌಡ ಮಾತ್ರವಲ್ಲ, ಡಿಕೆ ಶಿವಕುಮಾರ್‌ ಆದ ನಾನು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರೇ ಇಲ್ಲಿ ಸ್ಪರ್ಧಿಸಿದ್ದಾರೆ ಎಂದು ತಿಳಿದು ನೀವು ಕಾಂಗ್ರೆಸ್‌ಗೆ ಮತ ನೀಡಿ ಎಂದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

13 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

14 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

15 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

15 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

16 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

16 hours ago