ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಕುಟುಕಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ಚೆಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆಯೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೂ ಇದೆ. ಚೆಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೇ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೃದಯ ಚಿಕಿತ್ಸೆಯಾದ ಎರಡನೇ ದಿನಕ್ಕೆ ಆಚೆ ಬರುತ್ತಾರೆ. ಆಚೆ ಬಂದ ನಾಲ್ಕನೇ ದಿನಕ್ಕೆ ರಾಜ್ಯ ಸುತ್ತುತ್ತಾರೆ ಹೇಗೆ? ಎಂದು ಶಾಸಕರು ಪ್ರಶ್ನೆ ಮಾಡಿದರು.
ಇವೆಲ್ಲಾ ಚುನಾವಣೆಯ ಗಿಮಿಕ್. ನನಗೆ ಆ ತೊಂದರೆಯಿದೆ, ಈ ತೊಂದರೆಯಿದೆ ಎಂದು ಹೇಳಿದರೇ ಕೇಳಬೇಡಿ. ಅಧಿಕಾರದಲ್ಲಿದ್ದಾಗ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿ. ಈ ಚುನಾವಣೆ ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ. ಕಾಂಗ್ರೆಸ್ಗೆ ಹೆಚ್ಚಿನ ಮತ ನೀಡಿ ಅಭಿವೃದ್ಧಿಗಾಗಿ ಹಕ್ಕು ಚಲಾಯಿಸಿ ಎಂದು ಸಲಹೆ ನೀಡಿದರು.
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…