ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಕುಟುಕಿದ್ದಾರೆ.
ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ಚೆಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆಯೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೂ ಇದೆ. ಚೆಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೇ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೃದಯ ಚಿಕಿತ್ಸೆಯಾದ ಎರಡನೇ ದಿನಕ್ಕೆ ಆಚೆ ಬರುತ್ತಾರೆ. ಆಚೆ ಬಂದ ನಾಲ್ಕನೇ ದಿನಕ್ಕೆ ರಾಜ್ಯ ಸುತ್ತುತ್ತಾರೆ ಹೇಗೆ? ಎಂದು ಶಾಸಕರು ಪ್ರಶ್ನೆ ಮಾಡಿದರು.
ಇವೆಲ್ಲಾ ಚುನಾವಣೆಯ ಗಿಮಿಕ್. ನನಗೆ ಆ ತೊಂದರೆಯಿದೆ, ಈ ತೊಂದರೆಯಿದೆ ಎಂದು ಹೇಳಿದರೇ ಕೇಳಬೇಡಿ. ಅಧಿಕಾರದಲ್ಲಿದ್ದಾಗ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿ. ಈ ಚುನಾವಣೆ ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ. ಕಾಂಗ್ರೆಸ್ಗೆ ಹೆಚ್ಚಿನ ಮತ ನೀಡಿ ಅಭಿವೃದ್ಧಿಗಾಗಿ ಹಕ್ಕು ಚಲಾಯಿಸಿ ಎಂದು ಸಲಹೆ ನೀಡಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…