ಮಂಡ್ಯ

ಕೋಳಿ ಮಾಂಸವಲ್ಲ ನಾಯಿ ಮಾಂಸ ಎಂದು ಪುಕಾರು : ಚಿನಕುರುಳಿಯಲ್ಲಿ ಹೋಟೆಲ್ ಮುಚ್ಚಿಸಿದ ಗುಂಪು

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು.

ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ ಹೋಟೆಲ್‌ನಲ್ಲಿ ನಾಯಿ ಮಾಂಸದ ಬಿರಿಯಾನಿ ಮಾರಾಟ ಮಾಡಲಾಗುತ್ತಿದೆ ಎಂದು ಪುಕಾರು ಹುಟ್ಟಿಕೊಂಡು ಜನರು ಹೋಟೆಲ್ ಮುಂದೆ ಜಮಾಯಿಸಿ ಗಲಾಟೆ ನಡೆಸಿದರೆನ್ನಲಾಗಿದೆ. ಚಿನಕುರುಳಿ ಪೊಲೀಸರು ಮದಿನ ಹೋಟೆಲ್‌ನ ಮಾಲೀಕನನ್ನು ವಿಚಾರಣೆ ನಡೆಸಿದ್ದಾರೆ. ವಾಸ್ತವದಲ್ಲಿ ಮೈಸೂರಿನಿಂದ ಚಿನಕುರುಳಿಗೆ ಕೋಳಿ ಮಾಂಸದ ಕೆಲ ಭಾಗಗಳನ್ನು ಸರಬರಾಜು ಮಾಡುವ ವೇಳೆ ಮಾಂಸ ವಾಸನೆ ಬಂದಿದ್ದು, ಇದು ತಿನ್ನಲು ಯೋಗ್ಯವೇ ಇಲ್ಲವೇ ಎಂಬುದನ್ನು ಪರೀಕ್ಷೆಗೆ ಕಳಿಸಿ ಎಂದು ಒಂದು ಗುಂಪು ಆಗ್ರಹಿಸಿತು.

ಅಲ್ಲದೆ, ಗಲಾಟೆ ಮಾಡಿ ಹೋಟೆಲ್‌ನ ಬಾಗಿಲು ಮುಚ್ಚಿಸಿತು. ಬಳಿಕ ಪೊಲೀಸರು ಮಾಂಸದ ಬ್ಯಾಗ್‌ಗಳನ್ನು ಪರೀಕ್ಷೆಗೆ ಕಳಿಸಿತು. ಅಷ್ಟರಲ್ಲಿ ಸಾರ್ವಜನಿಕ ವಲಯದಲ್ಲಿ ಹೊಟೆಲ್‌ನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅಪಪ್ರಚಾರಗಳು ನಡೆದು, ಪೊಲೀಸರು ಇದು ನಾಯಿ ಮಾಂಸವಲ್ಲ ಕೋಳಿ ಮಾಂಸದ ಭಾಗಗಳು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

7 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

7 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

7 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

8 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

8 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

8 hours ago