ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು.
ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ ಹೋಟೆಲ್ನಲ್ಲಿ ನಾಯಿ ಮಾಂಸದ ಬಿರಿಯಾನಿ ಮಾರಾಟ ಮಾಡಲಾಗುತ್ತಿದೆ ಎಂದು ಪುಕಾರು ಹುಟ್ಟಿಕೊಂಡು ಜನರು ಹೋಟೆಲ್ ಮುಂದೆ ಜಮಾಯಿಸಿ ಗಲಾಟೆ ನಡೆಸಿದರೆನ್ನಲಾಗಿದೆ. ಚಿನಕುರುಳಿ ಪೊಲೀಸರು ಮದಿನ ಹೋಟೆಲ್ನ ಮಾಲೀಕನನ್ನು ವಿಚಾರಣೆ ನಡೆಸಿದ್ದಾರೆ. ವಾಸ್ತವದಲ್ಲಿ ಮೈಸೂರಿನಿಂದ ಚಿನಕುರುಳಿಗೆ ಕೋಳಿ ಮಾಂಸದ ಕೆಲ ಭಾಗಗಳನ್ನು ಸರಬರಾಜು ಮಾಡುವ ವೇಳೆ ಮಾಂಸ ವಾಸನೆ ಬಂದಿದ್ದು, ಇದು ತಿನ್ನಲು ಯೋಗ್ಯವೇ ಇಲ್ಲವೇ ಎಂಬುದನ್ನು ಪರೀಕ್ಷೆಗೆ ಕಳಿಸಿ ಎಂದು ಒಂದು ಗುಂಪು ಆಗ್ರಹಿಸಿತು.
ಅಲ್ಲದೆ, ಗಲಾಟೆ ಮಾಡಿ ಹೋಟೆಲ್ನ ಬಾಗಿಲು ಮುಚ್ಚಿಸಿತು. ಬಳಿಕ ಪೊಲೀಸರು ಮಾಂಸದ ಬ್ಯಾಗ್ಗಳನ್ನು ಪರೀಕ್ಷೆಗೆ ಕಳಿಸಿತು. ಅಷ್ಟರಲ್ಲಿ ಸಾರ್ವಜನಿಕ ವಲಯದಲ್ಲಿ ಹೊಟೆಲ್ನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅಪಪ್ರಚಾರಗಳು ನಡೆದು, ಪೊಲೀಸರು ಇದು ನಾಯಿ ಮಾಂಸವಲ್ಲ ಕೋಳಿ ಮಾಂಸದ ಭಾಗಗಳು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…