ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು.
ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ ಹೋಟೆಲ್ನಲ್ಲಿ ನಾಯಿ ಮಾಂಸದ ಬಿರಿಯಾನಿ ಮಾರಾಟ ಮಾಡಲಾಗುತ್ತಿದೆ ಎಂದು ಪುಕಾರು ಹುಟ್ಟಿಕೊಂಡು ಜನರು ಹೋಟೆಲ್ ಮುಂದೆ ಜಮಾಯಿಸಿ ಗಲಾಟೆ ನಡೆಸಿದರೆನ್ನಲಾಗಿದೆ. ಚಿನಕುರುಳಿ ಪೊಲೀಸರು ಮದಿನ ಹೋಟೆಲ್ನ ಮಾಲೀಕನನ್ನು ವಿಚಾರಣೆ ನಡೆಸಿದ್ದಾರೆ. ವಾಸ್ತವದಲ್ಲಿ ಮೈಸೂರಿನಿಂದ ಚಿನಕುರುಳಿಗೆ ಕೋಳಿ ಮಾಂಸದ ಕೆಲ ಭಾಗಗಳನ್ನು ಸರಬರಾಜು ಮಾಡುವ ವೇಳೆ ಮಾಂಸ ವಾಸನೆ ಬಂದಿದ್ದು, ಇದು ತಿನ್ನಲು ಯೋಗ್ಯವೇ ಇಲ್ಲವೇ ಎಂಬುದನ್ನು ಪರೀಕ್ಷೆಗೆ ಕಳಿಸಿ ಎಂದು ಒಂದು ಗುಂಪು ಆಗ್ರಹಿಸಿತು.
ಅಲ್ಲದೆ, ಗಲಾಟೆ ಮಾಡಿ ಹೋಟೆಲ್ನ ಬಾಗಿಲು ಮುಚ್ಚಿಸಿತು. ಬಳಿಕ ಪೊಲೀಸರು ಮಾಂಸದ ಬ್ಯಾಗ್ಗಳನ್ನು ಪರೀಕ್ಷೆಗೆ ಕಳಿಸಿತು. ಅಷ್ಟರಲ್ಲಿ ಸಾರ್ವಜನಿಕ ವಲಯದಲ್ಲಿ ಹೊಟೆಲ್ನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅಪಪ್ರಚಾರಗಳು ನಡೆದು, ಪೊಲೀಸರು ಇದು ನಾಯಿ ಮಾಂಸವಲ್ಲ ಕೋಳಿ ಮಾಂಸದ ಭಾಗಗಳು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…