ಮಂಡ್ಯ

ಕೋಳಿ ಮಾಂಸವಲ್ಲ ನಾಯಿ ಮಾಂಸ ಎಂದು ಪುಕಾರು : ಚಿನಕುರುಳಿಯಲ್ಲಿ ಹೋಟೆಲ್ ಮುಚ್ಚಿಸಿದ ಗುಂಪು

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು.

ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ ಹೋಟೆಲ್‌ನಲ್ಲಿ ನಾಯಿ ಮಾಂಸದ ಬಿರಿಯಾನಿ ಮಾರಾಟ ಮಾಡಲಾಗುತ್ತಿದೆ ಎಂದು ಪುಕಾರು ಹುಟ್ಟಿಕೊಂಡು ಜನರು ಹೋಟೆಲ್ ಮುಂದೆ ಜಮಾಯಿಸಿ ಗಲಾಟೆ ನಡೆಸಿದರೆನ್ನಲಾಗಿದೆ. ಚಿನಕುರುಳಿ ಪೊಲೀಸರು ಮದಿನ ಹೋಟೆಲ್‌ನ ಮಾಲೀಕನನ್ನು ವಿಚಾರಣೆ ನಡೆಸಿದ್ದಾರೆ. ವಾಸ್ತವದಲ್ಲಿ ಮೈಸೂರಿನಿಂದ ಚಿನಕುರುಳಿಗೆ ಕೋಳಿ ಮಾಂಸದ ಕೆಲ ಭಾಗಗಳನ್ನು ಸರಬರಾಜು ಮಾಡುವ ವೇಳೆ ಮಾಂಸ ವಾಸನೆ ಬಂದಿದ್ದು, ಇದು ತಿನ್ನಲು ಯೋಗ್ಯವೇ ಇಲ್ಲವೇ ಎಂಬುದನ್ನು ಪರೀಕ್ಷೆಗೆ ಕಳಿಸಿ ಎಂದು ಒಂದು ಗುಂಪು ಆಗ್ರಹಿಸಿತು.

ಅಲ್ಲದೆ, ಗಲಾಟೆ ಮಾಡಿ ಹೋಟೆಲ್‌ನ ಬಾಗಿಲು ಮುಚ್ಚಿಸಿತು. ಬಳಿಕ ಪೊಲೀಸರು ಮಾಂಸದ ಬ್ಯಾಗ್‌ಗಳನ್ನು ಪರೀಕ್ಷೆಗೆ ಕಳಿಸಿತು. ಅಷ್ಟರಲ್ಲಿ ಸಾರ್ವಜನಿಕ ವಲಯದಲ್ಲಿ ಹೊಟೆಲ್‌ನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅಪಪ್ರಚಾರಗಳು ನಡೆದು, ಪೊಲೀಸರು ಇದು ನಾಯಿ ಮಾಂಸವಲ್ಲ ಕೋಳಿ ಮಾಂಸದ ಭಾಗಗಳು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

6 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

6 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago