ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶ್ವಾನಗಳ ಓಟದ ಸ್ಪರ್ಧೆ ನಡೆದಿದ್ದು, ಜನರಂತೂ ಭಾರೀ ಆಸಕ್ತಿಯಿಂದ ಮುಗಿಬಿದ್ದು ವೀಕ್ಷಿಸಿದರು.
ಇಷ್ಟು ದಿನ ದೂರದ ದುಬೈನಂತಹ ದೇಶದಲ್ಲಿ ನಾಯಿಗಳ ಓಟದ ಸ್ಪರ್ಧೆಯನ್ನು ನಾವು ನೋಡಿದ್ವಿ. ಆದರೆ ಈಗ ನಮ್ಮ ದೇಶದಲ್ಲೇ ಮೊದಲ ಬಾರಿಗೆ ನಾಯಿಗಳ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಓಡುತ್ತಿದ್ದ ನಾಯಿಗಳ ಓಟ ಕಂಡು ನೆರೆದಿದ್ದವರು ಫುಲ್ ಎಂಜಾಯ್ ಮಾಡಿದರು.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಜಾಗಿನಕೆರೆ ಗ್ರಾಮದಲ್ಲಿ ಯುವಕರ ತಂಡವೊಂದು ಶ್ವಾನಗಳ ಓಟದ ಸ್ಪರ್ಧೆಯನ್ನು ಆಯೋಜಿಸಿತ್ತು. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸುಮಾರು 50ಕ್ಕೂ ಹೆಚ್ಚು ಶ್ವಾನಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು.
ಇನ್ನು ಈ ಯುವಕರು ಹಲವು ದಿನಗಳಿದ ಶ್ವಾನಗಳ ಸ್ಪರ್ಧೆ ನಡೆಸಲು ಚಿಂತನೆ ನಡೆಸಿದ್ದರು. ಹೀಗಾಗಿ ರೇಸ್ಗಾಗಿ ಇರುವ ಶ್ವಾನಗಳನ್ನು ತಂದು ಓಟದ ಸ್ಪರ್ಧೆಗೆ ಶ್ವಾನಗಳನ್ನು ಸಜ್ಜುಗೊಳಿಸಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದ ಈ ಓಟದ ಸ್ಪರ್ಧೆಯಲ್ಲಿ ಶ್ವಾನಗಳು ನಾ ಮುಂದು, ತಾ ಮುಂದು ಎಂದು ಓಡಿದವು. ಇದು ನೆರೆದಿದ್ದ ಜನರ ಮೈ ರೋಮಾಂಚನಗೊಳಿಸಿತು.
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…
ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…