ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶ್ವಾನಗಳ ಓಟದ ಸ್ಪರ್ಧೆ ನಡೆದಿದ್ದು, ಜನರಂತೂ ಭಾರೀ ಆಸಕ್ತಿಯಿಂದ ಮುಗಿಬಿದ್ದು ವೀಕ್ಷಿಸಿದರು.
ಇಷ್ಟು ದಿನ ದೂರದ ದುಬೈನಂತಹ ದೇಶದಲ್ಲಿ ನಾಯಿಗಳ ಓಟದ ಸ್ಪರ್ಧೆಯನ್ನು ನಾವು ನೋಡಿದ್ವಿ. ಆದರೆ ಈಗ ನಮ್ಮ ದೇಶದಲ್ಲೇ ಮೊದಲ ಬಾರಿಗೆ ನಾಯಿಗಳ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಓಡುತ್ತಿದ್ದ ನಾಯಿಗಳ ಓಟ ಕಂಡು ನೆರೆದಿದ್ದವರು ಫುಲ್ ಎಂಜಾಯ್ ಮಾಡಿದರು.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಜಾಗಿನಕೆರೆ ಗ್ರಾಮದಲ್ಲಿ ಯುವಕರ ತಂಡವೊಂದು ಶ್ವಾನಗಳ ಓಟದ ಸ್ಪರ್ಧೆಯನ್ನು ಆಯೋಜಿಸಿತ್ತು. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸುಮಾರು 50ಕ್ಕೂ ಹೆಚ್ಚು ಶ್ವಾನಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು.
ಇನ್ನು ಈ ಯುವಕರು ಹಲವು ದಿನಗಳಿದ ಶ್ವಾನಗಳ ಸ್ಪರ್ಧೆ ನಡೆಸಲು ಚಿಂತನೆ ನಡೆಸಿದ್ದರು. ಹೀಗಾಗಿ ರೇಸ್ಗಾಗಿ ಇರುವ ಶ್ವಾನಗಳನ್ನು ತಂದು ಓಟದ ಸ್ಪರ್ಧೆಗೆ ಶ್ವಾನಗಳನ್ನು ಸಜ್ಜುಗೊಳಿಸಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದ ಈ ಓಟದ ಸ್ಪರ್ಧೆಯಲ್ಲಿ ಶ್ವಾನಗಳು ನಾ ಮುಂದು, ತಾ ಮುಂದು ಎಂದು ಓಡಿದವು. ಇದು ನೆರೆದಿದ್ದ ಜನರ ಮೈ ರೋಮಾಂಚನಗೊಳಿಸಿತು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…