ಕೆ.ಆರ್.ಪೇಟೆ : ದಲಿತರನ್ನು ಕಾಂಗ್ರೆಸ್ ಪಕ್ಷದವರು ಕೇವಲ ಓಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳಬೇಡಿ. ದಲಿತರಿಗೆ ಪುರಸಭೆ ಸೇರಿದಂತೆ ಅವಕಾಶ ಇರುವ ಕಡೆಗಳಲ್ಲಿ ಅಧಿಕಾರ ಕೊಡಿ ಎಂದು ಪುರಸಭೆ ಸದಸ್ಯ ಡಿ.ಪ್ರೇಮ್ ಕುಮಾರ್ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರನ್ನು ಆಗ್ರಹಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ವೇಳೆ ಮಾತನಾಡಿದ ಪ್ರೇಮ್ ಕುಮಾರ್, ನನಗೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು.
ಪುರಸಭೆಯಲ್ಲಿ ತಮಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಅವಕಾಶ ಇದ್ದರೂ ಸಹ ನೀಡದೇ ವಂಚಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಈ ಬಗ್ಗೆ ಜಿಲ್ಲಾ ಮಂತ್ರಿಗಳು ಹಾಗೂ ಮುಖಂಡರೊಂದಿಗೆ ಸಮಾಲೋಚಿಸಿ ಸೂಕ್ತ ಪರಿಹಾರ ರೂಪಿಸುವುದಾಗಿ ತಿಳಿಸಿದರು.
ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾ.ಪಂ.ಉಪಾಧ್ಯಕ್ಷ ಹೆಮ್ಮಡಹಳ್ಳಿ ತಿಮ್ಮೇಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಆಶ್ರಯ ಮನೆಗಳನ್ನು ಕಳೆದ ಎರಡು ವರ್ಷದಿಂದ ಒಂದೂ ಮನೆ ನೀಡಿಲ್ಲ. ಇದರಿಂದ ಮತದಾರರು ಪಕ್ಷ ಸಂಘಟನೆಗೆ ಮತದಾರರ ಬಳಿ ಹೋದಾಗ ನಿಮ್ಮ ಕಾಂಗ್ರೆಸ್ ಪಕ್ಷದಿಂದ ಒಂದೇ ಒಂದು ಆಶ್ರಯ ಮನೆ ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ ಈಸಲವಾದರೂ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಕನಿಷ್ಠ ೧೦೦ ಇಂದಿರಾ, ಅಂಬೇಡ್ಕರ್, ಬಸವ ವಸತಿ ಯೋಜನೆಗಳ ಅಡಿ ಯಲ್ಲಿ ಮನೆಗಳನ್ನಾದರೂ ಮಂಜೂರು ಮಾಡಿ ಕಾಂಗ್ರೆಸ್ ಪಕ್ಷದ ಮರ್ಯಾದೆ ಉಳಿಸಬೇಕು ಎಂದು ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಅಗ್ರಹಾರಬಾಚಹಳ್ಳಿ ಎ.ಸಿ.ಮುರುಳಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಇದ್ದರೂ ಸಹ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಲಸವಿಲ್ಲದಂತಾಗಿದೆ. ಹಾಗಾಗಿ ಅಭಿವೃದ್ದಿಗೆ ಅನುಧಾನ ಬಿಡುಗಡೆ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಬೇಕು. ಈ ಮೂಲಕ ಗ್ರಾಮಗಳ ಅಭಿವೃದ್ದಿ ಮಾಡಿ ಪಕ್ಷ ಸಂಘಟನೆ ಮಾಡಲು ಅವಕಾಶ ನೀಡಬೇಕು ಎಂದು ಜಿಲ್ಲಾಧ್ಯಕ್ಷರಿಗೆ ಮನವಿಮಾಡಿ ಈ ಬಗ್ಗೆ ಸಚಿವರೊಂದಿಗೆ ಮಾತನಾಡಿ ಅನುಧಾನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಿದರು.
ಈ ವೇಳೆ ನಿವೃತ್ತ ಬಿ.ಎಸ್.ಎನ್.ಎನ್ ಅಧಿಕಾರಿ ಎಂ.ಕೆ.ರಮೇಶ್ ಅವರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…