ಮಂಡ್ಯ

ನಮ್ಮ ಅನುಮತಿ ಪಡೆಯದೆ ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ ; ರಾಜಮಾತೆ ಪ್ರಮೋದಾದೇವಿ

ಮಂಡ್ಯ : ಸಾಕಷ್ಟು ವಿರೋಧದ ನಡುವೆಯೂ ಕೂಡ ಸರ್ಕಾರ ಮಂಡ್ಯ ಬೇಬಿಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಗೆ ಮುಂದಾಗಿದೆ.  ಅಕ್ರಮಗಣಿಗಾರಿಕೆಯಿಂದ ಸಾವಿರಾರೂ ಕೋಟಿ ನಷ್ಟವಾಗುವುದರ ಜೊತೆಗೆ KRS ಜಲಾಶಯಕ್ಕೆ ಅಪಾಯದ ಭೀತಿ ಇದೆ. ಹೀಗಾಗಿ ಟ್ರಯಲ್‌ ಬ್ಲಾಸ್ಟ್‌ ಮಾಡುವುದು ಬೇಡ ಎಂದು ರೈತ ಮುಖಂಡರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಕೂಡ ಟ್ರಯಲ್ ಬ್ಲಾಸ್ಟ್‌ ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ವಿವಾದದ ಬೆನ್ನಲ್ಲೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಮಧ್ಯಪ್ರವೇಶ ಮಾಡಿದ್ದು, ಬೇಬಿಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದೆ. ನಮ್ಮ ಅನುಮತಿ ಪಡೆಯದೆ ಟ್ರಯಲ್‌ ಬ್ಲಾಸ್ಟ್‌ ನಡೆಸಬೇಡಿ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರ ಬರೆದಿದ್ದಾರೆ.

ಬೇಬಿ ಬೆಟ್ಟದ ಅಮೃತ ಮಹಲ್‌ ಕಾವಲ್‌ ನ ಸರ್ವೆ ನಂಬರ್‌ ೧ ರ ೧೬೨೩ ಎಕರೆ  ಅರಮನೆಗೆ ಸೇರಿದ  ಆಸ್ತಿ. ಈ ಆಸ್ತಿಯನ್ನ ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಆಗಿಲ್ಲ. KRS ಡ್ಯಾಂ ಸಮೀಪವಿರುವ ನಮ್ಮ ಖಾಸಗಿ ಜಮೀನಿನಲ್ಲಿ ಟ್ರಯಲ್‌ ಬ್ಲಾಸ್ಟ್‌ ನಡೆಸುವ ಹಕ್ಕು ಯಾರಿಗೂಇಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

KRS ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ ಗೆ ಅವಕಾಶ ನೀಡಬಾರದು. ಮೈಸೂರು ಸಂಸ್ಥಾನವಿದ್ದ ಸಮಯದಲ್ಲೆ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ತಂದೆಗೆ ನೀಡಿದ್ದು, ನನ್ನ ಪತಿ ೨೦೧೩ ರ ಡಿಸೆಂಬರ್‌ ೧೦ ರಂದು . ಈ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಯವರಿಗೆ ಅರ್ಜಿ ಸಲ್ಲಿಸಿದರೂ ಕೂಡ ನಾನ ಕಾರಣಗಳನ್ನ ಹೇಳುತ್ತಾ ಖಾತೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಹೈಕೋರ್ಟ್‌ ನಲ್ಲಿ ಪ್ರಕರಣ ದಾಖಲಿಸಿ ಬೇಬಿಬೆಟ್ಟ ಕಾವಲ್‌ ನ ಸರ್ವೆ ನಂ ೧ ರ ಪ್ರದೇಶವನ್ನ ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದೇನೆ ಎಂದು ಪತ್ರದಲ್ಲಿ ಪ್ರಮೋದಾ ದೇವಿ ತಿಳಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

12 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

8 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

8 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

9 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago