ಮಂಡ್ಯ

ನಮ್ಮ ಅನುಮತಿ ಪಡೆಯದೆ ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ ; ರಾಜಮಾತೆ ಪ್ರಮೋದಾದೇವಿ

ಮಂಡ್ಯ : ಸಾಕಷ್ಟು ವಿರೋಧದ ನಡುವೆಯೂ ಕೂಡ ಸರ್ಕಾರ ಮಂಡ್ಯ ಬೇಬಿಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಗೆ ಮುಂದಾಗಿದೆ.  ಅಕ್ರಮಗಣಿಗಾರಿಕೆಯಿಂದ ಸಾವಿರಾರೂ ಕೋಟಿ ನಷ್ಟವಾಗುವುದರ ಜೊತೆಗೆ KRS ಜಲಾಶಯಕ್ಕೆ ಅಪಾಯದ ಭೀತಿ ಇದೆ. ಹೀಗಾಗಿ ಟ್ರಯಲ್‌ ಬ್ಲಾಸ್ಟ್‌ ಮಾಡುವುದು ಬೇಡ ಎಂದು ರೈತ ಮುಖಂಡರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಕೂಡ ಟ್ರಯಲ್ ಬ್ಲಾಸ್ಟ್‌ ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಈ ವಿವಾದದ ಬೆನ್ನಲ್ಲೆ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಮಧ್ಯಪ್ರವೇಶ ಮಾಡಿದ್ದು, ಬೇಬಿಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದೆ. ನಮ್ಮ ಅನುಮತಿ ಪಡೆಯದೆ ಟ್ರಯಲ್‌ ಬ್ಲಾಸ್ಟ್‌ ನಡೆಸಬೇಡಿ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರ ಬರೆದಿದ್ದಾರೆ.

ಬೇಬಿ ಬೆಟ್ಟದ ಅಮೃತ ಮಹಲ್‌ ಕಾವಲ್‌ ನ ಸರ್ವೆ ನಂಬರ್‌ ೧ ರ ೧೬೨೩ ಎಕರೆ  ಅರಮನೆಗೆ ಸೇರಿದ  ಆಸ್ತಿ. ಈ ಆಸ್ತಿಯನ್ನ ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಆಗಿಲ್ಲ. KRS ಡ್ಯಾಂ ಸಮೀಪವಿರುವ ನಮ್ಮ ಖಾಸಗಿ ಜಮೀನಿನಲ್ಲಿ ಟ್ರಯಲ್‌ ಬ್ಲಾಸ್ಟ್‌ ನಡೆಸುವ ಹಕ್ಕು ಯಾರಿಗೂಇಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

KRS ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ ಗೆ ಅವಕಾಶ ನೀಡಬಾರದು. ಮೈಸೂರು ಸಂಸ್ಥಾನವಿದ್ದ ಸಮಯದಲ್ಲೆ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ತಂದೆಗೆ ನೀಡಿದ್ದು, ನನ್ನ ಪತಿ ೨೦೧೩ ರ ಡಿಸೆಂಬರ್‌ ೧೦ ರಂದು . ಈ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಯವರಿಗೆ ಅರ್ಜಿ ಸಲ್ಲಿಸಿದರೂ ಕೂಡ ನಾನ ಕಾರಣಗಳನ್ನ ಹೇಳುತ್ತಾ ಖಾತೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಹೈಕೋರ್ಟ್‌ ನಲ್ಲಿ ಪ್ರಕರಣ ದಾಖಲಿಸಿ ಬೇಬಿಬೆಟ್ಟ ಕಾವಲ್‌ ನ ಸರ್ವೆ ನಂ ೧ ರ ಪ್ರದೇಶವನ್ನ ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದೇನೆ ಎಂದು ಪತ್ರದಲ್ಲಿ ಪ್ರಮೋದಾ ದೇವಿ ತಿಳಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago