ಮಂಡ್ಯ

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.

ಇಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ “ಮೆಗಾ ಮ್ಯಾರಾಥಾನ್ -2026″ ಜಾಗೃತಿಗಾಗಿ, ಶಕ್ತಿಗಾಗಿ, ನಶೆ ಮುಕ್ತ ಮಂಡ್ಯಕ್ಕಾಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡ್ರಗ್ಸ್ ಎಂಬ ಮಾದಕವಸ್ತು ವಿಶ್ವದ ಪ್ರತಿಯೊಂದು ದೇಶದ ಯುವಜನತೆಯ ಮೇಲೆ ಪರಿಣಾಮ ಬೀರುತ್ತಿದ್ದು, ಡ್ರಗ್ಸ್ ವ್ಯಸನಿಗಳ ಮನಸ್ಸು ಮತ್ತು ದೇಹದ ಜೀವಕೋಶಗಳ ಮೇಲೆ ದುಷ್ಟ ಪರಿಣಾಮಗಳನ್ನು ಬೀರುತ್ತಿದೆ. ಯುವಜನತೆಯು ಕ್ಷಣಿಕ ಸುಖಕ್ಕೆ ತಮ್ಮ ಸುಖಜೀವನವನ್ನು ಕಳೆದುಕೊಳ್ಳಬೇಡಿ. ಯುವ ಜನತೆಯು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳನ್ನು ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಮನಸ್ಸು ವ್ಯಸನದಿಂದ ಮುಕ್ತವಾದರೆ ಮಾತ್ರ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಸಾಧ್ಯ. ದೈಹಿಕವಾಗಿ ಸದೃಢವಾಗಿದ್ದರೆ ಮಾನಸಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ. ಸಾಮಾಜಿಕ ಮತ್ತು ನಾಗರೀಕ ರಕ್ಷಣೆಯ ಕೆಲಸವನ್ನು ಪೊಲೀಸ್ ಇಲಾಖೆಯು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಶೋಭಾರಾಣಿ ವಿ. ಜೆ ರವರು ಮಾತನಾಡಿ, ನಶೆ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಮೆಗಾ ಮ್ಯಾರಾಥಾನ್ -2026” ಜಾಗೃತಿಗಾಗಿ, ಶಕ್ತಿಗಾಗಿ, ನಶೆ ಮುಕ್ತ ಮಂಡ್ಯಕ್ಕಾಗಿ ಮ್ಯಾರಥಾನ್ ಓಟ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಸತ್ಯ ಸಾಯಿ ಶಾಲಾ ಮಕ್ಕಳು ಹಾಗೂ ಎಲ್ಲ ಕಡೆಯಿಂದಲೂ ಭಾಗವಹಿಸಿದ್ದಾರೆ. ಕಾರ್ಯಕ್ರಮ ಯಶಸ್ವಿಯಾಗಿದೆ. ಎಲ್ಲರೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಾಸ್ಯ ನಟರಾದ ನಟರಾಜ್ (ಗಿಲ್ಲಿ ನಟ) ರವರು ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ. ದುಶ್ಚಟಗಳಿಂದ ದೂರವಿರಬೇಕು. ಪೊಲೀಸ್ ಇಲಾಖೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago