ಮಂಡ್ಯ

ಬಾಲಕಾರ್ಮಿಕರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಬಾಲಕಾರ್ಮಿಕ ಮಕ್ಕಳ ರಕ್ಷಣೆ ಮಾಡುವುದರ ಜೊತೆಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೂ ಒತ್ತು ನೀಡಿದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಸಮಾಜದಿಂದ ದೂರಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಮಂಗಳವಾರ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿಯಲ್ಲಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲಕಾರ್ಮಿಕರನ್ನು ಶಾಲೆಗೆ ದಾಖಲು‌ ಮಾಡಿದ ನಂತರ ಅವರ ಶೈಕ್ಷಣಿಕ ಪ್ರಗತಿ ಹಾಗೂ ಹಾಜರಾತಿಯ ಬಗ್ಗೆ ಪ್ರತಿ ಪರಿಶೀಲಿಸಬೇಕು ಇಲ್ಲವಾದಲ್ಲಿ ಅವರು ಪುನ: ಶಾಲೆ ಬಿಡುವ ಸಾಧ್ಯತೆ ಇರುತ್ತದೆ ಎಂದರು.

2022-23 ನೇ ಸಾಲಿನಲ್ಲಿ-10 ಬಾಲಕಾರ್ಮಿಕರು, 2023-24 ನೇ ಸಾಲಿನಲ್ಲಿ-20 ಹಾಗೂ 2024-25 ನೇ ಸಾಲಿನಲ್ಲಿ-6 ಬಾಲ ಕಾರ್ಮಿಕರನ್ನು ಪತ್ತೆ‌ಹಚ್ಚಿ ಕಾರ್ಮಿಕ ಇಲಾಖೆಯಿಂದ ಶಾಲೆಗೆ ದಾಖಲು ಮಾಡಲಾಗಿದೆ. ಈ 36 ಮಕ್ಕಳ ಮಾಹಿತಿ ವಿದ್ಯಾರ್ಥಿವಾರು ಶಿಕ್ಷಣ ಇಲಾಖೆಯಲ್ಲಿ ಲಭ್ಯವಿರಬೇಕು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ವಿದ್ಯಾರ್ಥಿಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕು ಎಂದರು.

ಕಾರ್ಮಿಕ ಇಲಾಖೆ ಅವರು ನಗರ ಪ್ರದೇಶದ ಬೇಕರಿ ಹಾಗೂ ಗ್ಯಾರೇಜ್ ಗಳಲ್ಲಿ ಹೆಚ್ಚು ದಾಳಿ ನಡೆಸುತ್ತಾರೆ. ಕಲ್ಲು ಗಣಿಗಾರಿಕೆ, ಸಣ್ಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶಗಳಲ್ಲೂ‌ ಹೆಚ್ಚು ದಾಳಿ ನಡೆಸಿ ಎಂದರು.

ಜೂನ್ 12 ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಜೂನ್ 12 ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಕಲಾಮಂದಿರದಲ್ಲಿ ಆಚರಿಸಿ ಹಾಗೂ ಜಿಲ್ಲೆಯ ಹೋಟೆಲ್ ಮಾಲೀಕರು, ಕ್ವಾರಿ ಮಾಲೀಕರು, ಕಾರ್ಖಾನೆಗಳ ಮುಖ್ಯಸ್ಥರಿಗೆ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯ ಬಗ್ಗೆ ಕಾರ್ಯಗಾರಗಳನ್ನು ಕೈಗೊಳ್ಳಿ ಎಂದರು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಮಾತನಾಡಿ, ಕಾರ್ಮಿಕ ಇಲಾಖೆ ಅವರು ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಹೆಚ್ಚು ದಾಳಿ ನಡೆಸಿ. ದಾಳಿ ಮಾಡಿದ ಬಗ್ಗೆ ಹೆಚ್ಚು ಪ್ರಚಾರ ಕೈಗೊಳ್ಳಿ ಎಂದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ-2 ಟಿ. ಲಕ್ಷ್ಮಿ, ಕಾರ್ಮಿಕ ಅಧಿಕಾರಿ ಡಾ. ಸವಿತಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

32 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

59 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago