ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್ಒ) ಡಾ. ಕೆ. ಮೋಹನ್ ಅವರನ್ನು ಮೈಸೂರು ಜಿಲ್ಲಾ ಅಬಕಾರಿ ಉಪ ಆಯುಕ್ತರ (Deputy Commissioner of Excise) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸದ್ಯ ಇದು ವಿವಾದಕ್ಕೆ ಕಾರಣವಾಗಿದ್ದು, ಆರೋಗ್ಯ ಅಧಿಕಾರಿಯನ್ನು ಅಬಕಾರಿಗೆ ವರ್ಗಾವಣೆ ಮಾಡಿದ್ದು ಏತಕ್ಕೆ? ಸರ್ಕಾರ ಹಳಿ ತಪ್ಪಿರುವುದರಿಂದ ಇದೆಲ್ಲಾ ಆಗಿದೆ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧಿ ಕಿಡಿಕಾರಿವೆ. ಸರ್ಕಾರಿ ಅಧಿಕಾರಿಗಳ ನಿಯಮ ಪ್ರಕಾರ ಮೂಲ ಇಲಾಖೆಯಿಂದ ಬೇರೆ ಇಲಾಖೆ ವರ್ಗಾಯಿಸುವಂತಿಲ್ಲ. ಅದರಲ್ಲೂ ಆರೋಗ್ಯ ಅಧಿಕಾರಿಯನ್ನು ಅಬಕಾರಿ ಅಧಿಕಾರಿಯನ್ನಾಗಿ ನೇಮಿಸುವುದು ಸಾಧ್ಯವಿಲ್ಲ. ವರ್ಗಾವಣೆ ಪತ್ರದ ಟಿಪ್ಪಣಿಯಲ್ಲಿ ಖುದ್ದು ಸಿಎಂ ಸಹಿ ಇದೆ. ಇದೆಲ್ಲಾ ಹೇಗೆ ಸಾಧ್ಯ? ಸರ್ಕಾರದಲ್ಲಿ ಯಾರ ಹಸ್ತಕ್ಷೇಪ ಇದೆ ಎಂದೆಲ್ಲಾ ವಿಪಕ್ಷಗಳು ಪ್ರಶ್ನಿಸಿವೆ.
ಡಾ.ಕೆ.ಮೋಹನ್ ಅವರು ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮೈಸೂರು ಜಿಲ್ಲಾ ಅಬಕಾರಿ ಉಪ ಆಯುಕ್ತ ಆರ್. ನಾಗಶಯನ ಅವರನ್ನು ಲಂಚ ಆರೋಪದ ಮೇಲೆ ಸರ್ಕಾರ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ, ಈ ಹುದ್ದೆಗೆ ಹೊಸ ಅಧಿಕಾರಿಯನ್ನು ನಿಯೋಜಿಸುವ ಸಲುವಾಗಿ ಡಾ. ಮೋಹನ್ ಅವರನ್ನು ಆರೋಗ್ಯ ಇಲಾಖೆಯಿಂದ ವರ್ಗಾವಣೆ ಆಗಿದೆ.
ಅನ್ಯ ಇಲಾಖೆಗೆ ವರ್ಗಾವಣೆ ಇಲ್ಲ ; ಆರೋಗ್ಯ ಸಚಿವರ ಸ್ಪಷ್ಟನೆ
ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲು ಆಗುವುದಿಲ್ಲ. ಏತಕ್ಕೆ ಹೀಗೆ ಆಗಿದೆ ಎಂದು ಮಾಹಿತಿ ಪಡೆದು ವಿವರ ನೀಡಲಿದ್ದಾನೆ ಎಂದು ತಿಳಿಸಿದ್ದಾರೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…