ಮಂಡ್ಯ

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್‌ಒ) ಡಾ. ಕೆ. ಮೋಹನ್ ಅವರನ್ನು ಮೈಸೂರು ಜಿಲ್ಲಾ ಅಬಕಾರಿ ಉಪ ಆಯುಕ್ತರ (Deputy Commissioner of Excise) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಸದ್ಯ ಇದು ವಿವಾದಕ್ಕೆ ಕಾರಣವಾಗಿದ್ದು, ಆರೋಗ್ಯ ಅಧಿಕಾರಿಯನ್ನು ಅಬಕಾರಿಗೆ ವರ್ಗಾವಣೆ ಮಾಡಿದ್ದು ಏತಕ್ಕೆ? ಸರ್ಕಾರ ಹಳಿ ತಪ್ಪಿರುವುದರಿಂದ ಇದೆಲ್ಲಾ ಆಗಿದೆ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧಿ ಕಿಡಿಕಾರಿವೆ. ಸರ್ಕಾರಿ ಅಧಿಕಾರಿಗಳ ನಿಯಮ ಪ್ರಕಾರ ಮೂಲ ಇಲಾಖೆಯಿಂದ ಬೇರೆ ಇಲಾಖೆ ವರ್ಗಾಯಿಸುವಂತಿಲ್ಲ. ಅದರಲ್ಲೂ ಆರೋಗ್ಯ ಅಧಿಕಾರಿಯನ್ನು ಅಬಕಾರಿ ಅಧಿಕಾರಿಯನ್ನಾಗಿ ನೇಮಿಸುವುದು ಸಾಧ್ಯವಿಲ್ಲ. ವರ್ಗಾವಣೆ ಪತ್ರದ ಟಿಪ್ಪಣಿಯಲ್ಲಿ ಖುದ್ದು ಸಿಎಂ ಸಹಿ ಇದೆ. ಇದೆಲ್ಲಾ ಹೇಗೆ ಸಾಧ್ಯ? ಸರ್ಕಾರದಲ್ಲಿ ಯಾರ ಹಸ್ತಕ್ಷೇಪ ಇದೆ ಎಂದೆಲ್ಲಾ ವಿಪಕ್ಷಗಳು ಪ್ರಶ್ನಿಸಿವೆ.

ಡಾ.ಕೆ.ಮೋಹನ್ ಅವರು ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಇಲಾಖೆಯನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮೈಸೂರು ಜಿಲ್ಲಾ ಅಬಕಾರಿ ಉಪ ಆಯುಕ್ತ ಆರ್. ನಾಗಶಯನ ಅವರನ್ನು ಲಂಚ ಆರೋಪದ ಮೇಲೆ ಸರ್ಕಾರ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ, ಈ ಹುದ್ದೆಗೆ ಹೊಸ ಅಧಿಕಾರಿಯನ್ನು ನಿಯೋಜಿಸುವ ಸಲುವಾಗಿ ಡಾ. ಮೋಹನ್ ಅವರನ್ನು ಆರೋಗ್ಯ ಇಲಾಖೆಯಿಂದ ವರ್ಗಾವಣೆ ಆಗಿದೆ.

ಅನ್ಯ ಇಲಾಖೆಗೆ ವರ್ಗಾವಣೆ ಇಲ್ಲ ; ಆರೋಗ್ಯ ಸಚಿವರ ಸ್ಪಷ್ಟನೆ
ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲು ಆಗುವುದಿಲ್ಲ. ಏತಕ್ಕೆ ಹೀಗೆ ಆಗಿದೆ ಎಂದು ಮಾಹಿತಿ ಪಡೆದು ವಿವರ ನೀಡಲಿದ್ದಾನೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago