ಮಂಡ್ಯ

ನಾಗಮಂಗಲದಲ್ಲಿ ವಾಹನ ಚಾಲನಾ ತರಬೇತಿ ಕೇಂದ್ರ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ನಿರುದ್ಯೋಗಿ ಯುವಜನರಿಗೆ ವಾಹನ ಚಾಲನೆ ತರಬೇತಿ ನೀಡಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನ ಚಾಲನಾ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.

ಅವರು ಇಂದು ಬೆಳ್ಳೂರಿನಲ್ಲಿ ನಡೆದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ತರಬೇತಿ ಕೇಂದ್ರ ಪ್ರಾರಂಭಿಸಲು 9.5 ಎಕರೆ ಸ್ಥಳವನ್ನು ಪ್ರಾದೇಶಿಕ ಸಾರಿಗೆ ಇಲಾಖೆಗೆ ಹಸ್ತಾಂತರಿಸಿ ಮಾತನಾಡಿದರು.

ಭೂ ಸುರಕ್ಷಾ ಯೋಜನೆಗೆ ಚಾಲನೆ

ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಪುರಾತನ ಕಾಲದಿಂದಿರುವ ಆಸ್ತಿ ಪತ್ರಗಳು ಹಾಗೂ ಇನ್ನಿತರೆ ದಾಖಲೆಗಳನ್ನು ಡಿಜಟಲೀಕರಣ ಮಾಡುವ ಭೂ ಸುರಕ್ಷಾ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದರಿಂದ ಯಾವುದೇ ದಾಖಲೆಗಳನ್ನು ಮುಂದೆ ಕಳೆದುಹೋಗುವುದು, ತಿದ್ದುವುದು ತಪ್ಪುತ್ತದೆ ಎಂದರು.

31 ಕೋಟಿ ರೂ ವೆಚ್ಚದಲ್ಲಿ ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವಿತರಣಾ ಜಾಲ ವ್ಯವಸ್ಥೆಯನ್ನು ಒದಗಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದರಿಂದ ಹೆಚ್ಚುವರಿ ಟ್ಯಾಂಕ್ ಹಾಗೂ ಮನೆ- ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ ಒದಗಿಸಲಾಗುವುದು ಎಂದರು.

1 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ, 55 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡವನ್ನು ಉದ್ಘಾಟಿಸಲಾಗಿದೆ. 5 ಕೋಟಿ ರೂ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದೇ ರೀತಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಬೆಳ್ಳೂರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಸಹ ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಸಮಯಾವಕಾಶ ನೀಡುವುದರೊಂದಿಗೆ ಸಹಕರಿಸಬೇಕು ಎಂದರು.

ಪಟ್ಟಣ ಪಂಚಾಯಿತಿಯ ವ್ಯಾಪ್ತಿ ಹೆಚ್ಚಳವಾಗುತ್ತಿದ್ದು, 70 ಕೋಟಿ ರೂ ವೆಚ್ಚದಲ್ಲಿ ಒಳ ಚರಂಡಿ ಕೆಲಸಗಳು ಹಾಗೂ ಸುತ್ತ ಮುತ್ತಲಿನ ರಸ್ತೆಯನ್ನು 7 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಬೆಳ್ಳೂರಿನಲ್ಲಿ ಪಟ್ಟಣ ಪಂಚಾಯಿತಿ ಹೊಸ ಕಟ್ಟಡ, ಬಸ್ ನಿಲ್ದಾಣ, ನಾಡ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಅವರು ಬಸ್ ನಿಲ್ದಾಣಕ್ಕೆ ಮಂಜೂರು ಮಾಡಲಾಗಿರುವ 1 ಎಕರೆ 30 ಕುಂಟೆ ಸ್ಥಳವನ್ನು ಹಸ್ತಾಂತರ ಮಾಡಿದರು.

ಸಾರ್ವಜನಿಕರು ಕುಂದು ಕೊರತೆಗಳನ್ನು ದಾಖಲಿಸಲು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ತಹಶೀಲ್ದಾರ್ ಕಚೇರಿಗಳಲ್ಲಿ ಪುಸ್ತಕ ಇಡಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ‌ ಮಾಡಿ ಪ್ರತಿವಾರ ಪುಸ್ತಕವನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆಯನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ಪರಿಹರಿಸಬೇಕು ಎಂದರು‌.

ಪ್ರತಿ ತಾಲ್ಲೂಕಿಗೆ 220 ಕೋಟಿ ರೂ

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ತಾಲ್ಲೂಕಿಗೆ ಒಂದು ವರ್ಷಕ್ಕೆ 220 ಕೋಟಿ ರೂ ನೇರವಾಗಿ ಒದಗಿಸಲಾಗುವುದು. ಇದರೊಂದಿಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಆದರ್ಶ, ಬೆಳ್ಳೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ, ಮೂಡಲಪ್ಪ, ದಿನೇಶ್, ಸುರೇಶ್, ರಾಜೇಶ್, ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago