ಮಂಡ್ಯ

ನಾಗಮಂಗಲದಲ್ಲಿ ವಾಹನ ಚಾಲನಾ ತರಬೇತಿ ಕೇಂದ್ರ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ನಿರುದ್ಯೋಗಿ ಯುವಜನರಿಗೆ ವಾಹನ ಚಾಲನೆ ತರಬೇತಿ ನೀಡಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನ ಚಾಲನಾ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.

ಅವರು ಇಂದು ಬೆಳ್ಳೂರಿನಲ್ಲಿ ನಡೆದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ತರಬೇತಿ ಕೇಂದ್ರ ಪ್ರಾರಂಭಿಸಲು 9.5 ಎಕರೆ ಸ್ಥಳವನ್ನು ಪ್ರಾದೇಶಿಕ ಸಾರಿಗೆ ಇಲಾಖೆಗೆ ಹಸ್ತಾಂತರಿಸಿ ಮಾತನಾಡಿದರು.

ಭೂ ಸುರಕ್ಷಾ ಯೋಜನೆಗೆ ಚಾಲನೆ

ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಪುರಾತನ ಕಾಲದಿಂದಿರುವ ಆಸ್ತಿ ಪತ್ರಗಳು ಹಾಗೂ ಇನ್ನಿತರೆ ದಾಖಲೆಗಳನ್ನು ಡಿಜಟಲೀಕರಣ ಮಾಡುವ ಭೂ ಸುರಕ್ಷಾ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದರಿಂದ ಯಾವುದೇ ದಾಖಲೆಗಳನ್ನು ಮುಂದೆ ಕಳೆದುಹೋಗುವುದು, ತಿದ್ದುವುದು ತಪ್ಪುತ್ತದೆ ಎಂದರು.

31 ಕೋಟಿ ರೂ ವೆಚ್ಚದಲ್ಲಿ ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವಿತರಣಾ ಜಾಲ ವ್ಯವಸ್ಥೆಯನ್ನು ಒದಗಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದರಿಂದ ಹೆಚ್ಚುವರಿ ಟ್ಯಾಂಕ್ ಹಾಗೂ ಮನೆ- ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ ಒದಗಿಸಲಾಗುವುದು ಎಂದರು.

1 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ, 55 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡವನ್ನು ಉದ್ಘಾಟಿಸಲಾಗಿದೆ. 5 ಕೋಟಿ ರೂ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದೇ ರೀತಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಬೆಳ್ಳೂರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಸಹ ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಸಮಯಾವಕಾಶ ನೀಡುವುದರೊಂದಿಗೆ ಸಹಕರಿಸಬೇಕು ಎಂದರು.

ಪಟ್ಟಣ ಪಂಚಾಯಿತಿಯ ವ್ಯಾಪ್ತಿ ಹೆಚ್ಚಳವಾಗುತ್ತಿದ್ದು, 70 ಕೋಟಿ ರೂ ವೆಚ್ಚದಲ್ಲಿ ಒಳ ಚರಂಡಿ ಕೆಲಸಗಳು ಹಾಗೂ ಸುತ್ತ ಮುತ್ತಲಿನ ರಸ್ತೆಯನ್ನು 7 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಬೆಳ್ಳೂರಿನಲ್ಲಿ ಪಟ್ಟಣ ಪಂಚಾಯಿತಿ ಹೊಸ ಕಟ್ಟಡ, ಬಸ್ ನಿಲ್ದಾಣ, ನಾಡ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಅವರು ಬಸ್ ನಿಲ್ದಾಣಕ್ಕೆ ಮಂಜೂರು ಮಾಡಲಾಗಿರುವ 1 ಎಕರೆ 30 ಕುಂಟೆ ಸ್ಥಳವನ್ನು ಹಸ್ತಾಂತರ ಮಾಡಿದರು.

ಸಾರ್ವಜನಿಕರು ಕುಂದು ಕೊರತೆಗಳನ್ನು ದಾಖಲಿಸಲು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ತಹಶೀಲ್ದಾರ್ ಕಚೇರಿಗಳಲ್ಲಿ ಪುಸ್ತಕ ಇಡಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ‌ ಮಾಡಿ ಪ್ರತಿವಾರ ಪುಸ್ತಕವನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆಯನ್ನು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ಪರಿಹರಿಸಬೇಕು ಎಂದರು‌.

ಪ್ರತಿ ತಾಲ್ಲೂಕಿಗೆ 220 ಕೋಟಿ ರೂ

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ತಾಲ್ಲೂಕಿಗೆ ಒಂದು ವರ್ಷಕ್ಕೆ 220 ಕೋಟಿ ರೂ ನೇರವಾಗಿ ಒದಗಿಸಲಾಗುವುದು. ಇದರೊಂದಿಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಆದರ್ಶ, ಬೆಳ್ಳೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ, ಮೂಡಲಪ್ಪ, ದಿನೇಶ್, ಸುರೇಶ್, ರಾಜೇಶ್, ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

15 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

26 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

58 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago