ಮಂಡ್ಯ

ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ : ಸಚಿವ ಎನ್​ ಚಲುವರಾಯಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯದಲ್ಲಿ ಜೂನ್​ ತಿಂಗಳಲ್ಲಿ ಮುಂಗಾರು ಮಳೆ ಆಗಮನ ವಿಳಂಬವಾಗಿತ್ತು. ಹಾಗಾಗಿ ಅಲ್ಪ ಸ್ವಲ್ಪ ಮಳೆಯಾಗಿತ್ತು. ನಂತರ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಸಾಮಾನ್ಯ ಪ್ರಮಾಣಕ್ಕಿಂತಾ ಶೇ. 3 ರಷ್ಟು ಹೆಚ್ಚುವರಿಯಾಗಿತ್ತು. ಅದರಲ್ಲಿಯೂ ಕಳರಾವಳಿ ಭಾಗದಲ್ಲಿ ಭಾರೀ ಮಳೆ ಆಗಿದ್ದು, ಜನರು, ರೈತರು ಸಂತಸಗೊಂಡಿದ್ದರು. ಆದರೆ ಆಗಸ್ಟ್​ ತಿಂಗಳಲ್ಲಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಬಿಸಿಲಿನ ಬೇಗೆಗೆ ಜನರು ಕಂಗಾಲಾಗಿದ್ದಾರೆ. ಇವೆಲ್ಲದರ ಮಧ್ಯೆ ಮೋಡಬಿತ್ತನೆ ಎಂಬ ಮಾತು ಸಹ ಕೇಳಿಬರುತ್ತಿದ್ದು, ಈ ವಿಚಾರವಾಗಿ ಮಾತನಾಡಿರುವ ಕೃಷಿ ಖಾತೆ ಸಚಿವ ಎನ್. ಚಲುವರಾಯಸ್ವಾಮಿ, ಮೋಡಬಿತ್ತನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಸೂಕ್ತ ಪ್ರತಿಫಲ ಸಿಕ್ಕಿಲ್ಲ. ಆಗಸ್ಟ್​ 30ರೊಳಗೆ ಹಳ್ಳಿಗಳನ್ನು ವೀಕ್ಷಣೆ ಮಾಡಿ ವರದಿ ನೀಡಲು ಡಿಸಿಗಳಿಗೆ ತಿಳಿಸಿದ್ದೇವೆ. ಸೆಪ್ಟೆಂಬರ್​​ 4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡಿ, ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ತಿಳಿಸಿದರು.

ಅಪರೇಷನ್ ಹಸ್ತದ ಅವಶ್ಯಕತೆ ಇಲ್ಲ, ನಾವು 136 ಸ್ಥಾನ ಗೆದ್ದಿದ್ದೇವೆ. ನಮ್ಮ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಂದರೆ ಕರೆದುಕೊಳ್ಳುತ್ತೇವೆ. ನಾವು ಯಾರ ಮನೆಯ ಬಾಗಿಲನ್ನೂ ತಟ್ಟಿಲ್ಲ. ಮಂಡ್ಯ ಜಿಲ್ಲೆಯ ಇಬ್ಬರು ಮಾಜಿ ಶಾಸಕರು ಪಕ್ಷಕ್ಕೆ ಬರಬಹುದು ಎಂದು ಹೇಳಿದ್ದಾರೆ.

ನಾವು ಕೊಟ್ಟ ಮಾತಿನಂತೆ ಈಗಾಗಲೇ 4 ಗ್ಯಾರಂಟಿ ಜಾರಿಗೊಳಿಸಿದ್ದೇವೆ. 2-3 ದಿನಗಳಲ್ಲಿ ಮನೆ ಯಜಮಾನಿ ಖಾತೆಗೆ 2 ಸಾವಿರ ಹೋಗುತ್ತದೆ. ಆ.1ರಂದೇ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಕೊಡುವ ಯೋಜನೆ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.

ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಇಂದು ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದೆ. ಸೆಪ್ಟೆಂಬರ್​ 1ರಂದು ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆಯುತ್ತೆ. ನೀರು ಬಿಡಲು ಸಾಧ್ಯವಿಲ್ಲವೆಂದು ಮನವರಿಕೆ ಮಾಡಿಕೊಟ್ಟಿದ್ದೇವೆ. ಮಳೆಯಾಗದ ಹಿನ್ನೆಲೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದೇವೆ ಎಂದರು.

lokesh

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

28 mins ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

48 mins ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

54 mins ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

59 mins ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

1 hour ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

1 hour ago