ಮಂಡ್ಯ

ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ : ಸಚಿವ ಎನ್​ ಚಲುವರಾಯಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯದಲ್ಲಿ ಜೂನ್​ ತಿಂಗಳಲ್ಲಿ ಮುಂಗಾರು ಮಳೆ ಆಗಮನ ವಿಳಂಬವಾಗಿತ್ತು. ಹಾಗಾಗಿ ಅಲ್ಪ ಸ್ವಲ್ಪ ಮಳೆಯಾಗಿತ್ತು. ನಂತರ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಸಾಮಾನ್ಯ ಪ್ರಮಾಣಕ್ಕಿಂತಾ ಶೇ. 3 ರಷ್ಟು ಹೆಚ್ಚುವರಿಯಾಗಿತ್ತು. ಅದರಲ್ಲಿಯೂ ಕಳರಾವಳಿ ಭಾಗದಲ್ಲಿ ಭಾರೀ ಮಳೆ ಆಗಿದ್ದು, ಜನರು, ರೈತರು ಸಂತಸಗೊಂಡಿದ್ದರು. ಆದರೆ ಆಗಸ್ಟ್​ ತಿಂಗಳಲ್ಲಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಬಿಸಿಲಿನ ಬೇಗೆಗೆ ಜನರು ಕಂಗಾಲಾಗಿದ್ದಾರೆ. ಇವೆಲ್ಲದರ ಮಧ್ಯೆ ಮೋಡಬಿತ್ತನೆ ಎಂಬ ಮಾತು ಸಹ ಕೇಳಿಬರುತ್ತಿದ್ದು, ಈ ವಿಚಾರವಾಗಿ ಮಾತನಾಡಿರುವ ಕೃಷಿ ಖಾತೆ ಸಚಿವ ಎನ್. ಚಲುವರಾಯಸ್ವಾಮಿ, ಮೋಡಬಿತ್ತನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಸೂಕ್ತ ಪ್ರತಿಫಲ ಸಿಕ್ಕಿಲ್ಲ. ಆಗಸ್ಟ್​ 30ರೊಳಗೆ ಹಳ್ಳಿಗಳನ್ನು ವೀಕ್ಷಣೆ ಮಾಡಿ ವರದಿ ನೀಡಲು ಡಿಸಿಗಳಿಗೆ ತಿಳಿಸಿದ್ದೇವೆ. ಸೆಪ್ಟೆಂಬರ್​​ 4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡಿ, ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ತಿಳಿಸಿದರು.

ಅಪರೇಷನ್ ಹಸ್ತದ ಅವಶ್ಯಕತೆ ಇಲ್ಲ, ನಾವು 136 ಸ್ಥಾನ ಗೆದ್ದಿದ್ದೇವೆ. ನಮ್ಮ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಂದರೆ ಕರೆದುಕೊಳ್ಳುತ್ತೇವೆ. ನಾವು ಯಾರ ಮನೆಯ ಬಾಗಿಲನ್ನೂ ತಟ್ಟಿಲ್ಲ. ಮಂಡ್ಯ ಜಿಲ್ಲೆಯ ಇಬ್ಬರು ಮಾಜಿ ಶಾಸಕರು ಪಕ್ಷಕ್ಕೆ ಬರಬಹುದು ಎಂದು ಹೇಳಿದ್ದಾರೆ.

ನಾವು ಕೊಟ್ಟ ಮಾತಿನಂತೆ ಈಗಾಗಲೇ 4 ಗ್ಯಾರಂಟಿ ಜಾರಿಗೊಳಿಸಿದ್ದೇವೆ. 2-3 ದಿನಗಳಲ್ಲಿ ಮನೆ ಯಜಮಾನಿ ಖಾತೆಗೆ 2 ಸಾವಿರ ಹೋಗುತ್ತದೆ. ಆ.1ರಂದೇ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಕೊಡುವ ಯೋಜನೆ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.

ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಇಂದು ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದೆ. ಸೆಪ್ಟೆಂಬರ್​ 1ರಂದು ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆಯುತ್ತೆ. ನೀರು ಬಿಡಲು ಸಾಧ್ಯವಿಲ್ಲವೆಂದು ಮನವರಿಕೆ ಮಾಡಿಕೊಟ್ಟಿದ್ದೇವೆ. ಮಳೆಯಾಗದ ಹಿನ್ನೆಲೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದೇವೆ ಎಂದರು.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago