ಮಂಡ್ಯ

ಬರಗಾಲ ಹಿನ್ನೆಲೆ ಕಬ್ಬಿನ ಕೊರತೆ ಎದುರಾಗಬಹುದು: ಎನ್‌ ಚಲುವರಾಯಸ್ವಾಮಿ

ಮಂಡ್ಯ: ಬರಗಾಲ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿ ಕಬ್ಬಿನ ಕೊರತೆ ಉಂಟಾಗಲಿದ್ದು, ಲಾಭ-ನಷ್ಟ ನೋಡಿ ಕಾರ್ಖಾನೆ ನಡೆಸುತ್ತಿಲ್ಲ. ರೈತರಿಗೆ ಅನುಕೂಲವಾದರೆ ಸಾಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

ಭಾನುವಾರ ನಗರದ ಮೈಶುಗರ್‌ ಕಾರ್ಖಾನೆಯ ಬಾಯ್ಲರ್‌ಗೆ  ಪೂಜೆ ಅಗ್ನಿ ಸ್ಪರ್ಶ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಮೈಶುಗರ್‌ ಕಾರ್ಖಾನೆಯು ಸರ್ಕಾರದ ನೆರವಿನಿಂದ ಪುನಾರಂಭವಾಗಿದ್ದು, ಈ ಬಾರಿ ಕಬ್ಬು ಹರೆಯಲು ಯಾವುದೇ ಅಡೆತಡೆಯಿಲ್ಲದೆ ಸಜ್ಜಾಗಿದೆ ಎಂದರು.

ಜಿಲ್ಲೆಯ ರೈತರು ಕಳೆದ ಬಾರಿ ಬರಗಾಲ ಎದುರಿಸಿದ್ದಾರೆ, ಹೀಗಾಗಿ ಈ ಬಾರಿ ಕಬ್ಬಿನ ಕೊರತೆ ಇರುತ್ತದೆ. ಆದರು ಸಹ ಸುಮಾರು 2,50,000 ಮೆ.ಟನ್ ಕಬ್ಬು ನುರಿಸುವ ಉತ್ತಮ ಗುರಿಯನ್ನು ಹೊಂದಲಾಗಿದ್ದು, ಪ್ರಸ್ತುತ 1,90,000 ಮರು ಕಬ್ಬು ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ಹೊರಜಿಲ್ಲೆಯ ಮೂಲಕ ನುರಿಸಲಾಗುವುದು ಎಂದರು.

ಕಾರ್ಖಾನೆಯ ಲಾಭ, ನಷ್ಠದ ಆಧಾರದ ಮೇಲೆ ಸದ್ಯಕ್ಕೆ ಕಾರ್ಯನಿರ್ವಹಿಸುವುದು ಕಷ್ಟಕರ. ರೈತರ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆ ಲಾಭಾದಯಕವಾಗಿ ನಡೆಯಲಿದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

2 hours ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

2 hours ago

ಕಾಡ ನೋಡಹೋಗಿ ಲಂಟಾನ ಕಂಡು ಬಂದೆ

ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…

2 hours ago

‘ಜನರ ಸೇವೆಗೆ ಎಟುಕದ ಅರಕೆರೆ ನಾಡಕಚೇರಿ’

ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…

2 hours ago

ಗಣಗೂರು ವ್ಯಾಪ್ತಿಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…

2 hours ago

ಮೈಸೂರು ಆಯ್ತು; ಈಗ ಜಿಲ್ಲೆಗೂ ಹಬ್ಬಿದ ಮಾದಕ ವಸ್ತುವಿನ ಘಾಟು

ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…

2 hours ago