ಮಂಡ್ಯ: ಬರಗಾಲ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿ ಕಬ್ಬಿನ ಕೊರತೆ ಉಂಟಾಗಲಿದ್ದು, ಲಾಭ-ನಷ್ಟ ನೋಡಿ ಕಾರ್ಖಾನೆ ನಡೆಸುತ್ತಿಲ್ಲ. ರೈತರಿಗೆ ಅನುಕೂಲವಾದರೆ ಸಾಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಭಾನುವಾರ ನಗರದ ಮೈಶುಗರ್ ಕಾರ್ಖಾನೆಯ ಬಾಯ್ಲರ್ಗೆ ಪೂಜೆ ಅಗ್ನಿ ಸ್ಪರ್ಶ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಮೈಶುಗರ್ ಕಾರ್ಖಾನೆಯು ಸರ್ಕಾರದ ನೆರವಿನಿಂದ ಪುನಾರಂಭವಾಗಿದ್ದು, ಈ ಬಾರಿ ಕಬ್ಬು ಹರೆಯಲು ಯಾವುದೇ ಅಡೆತಡೆಯಿಲ್ಲದೆ ಸಜ್ಜಾಗಿದೆ ಎಂದರು.
ಜಿಲ್ಲೆಯ ರೈತರು ಕಳೆದ ಬಾರಿ ಬರಗಾಲ ಎದುರಿಸಿದ್ದಾರೆ, ಹೀಗಾಗಿ ಈ ಬಾರಿ ಕಬ್ಬಿನ ಕೊರತೆ ಇರುತ್ತದೆ. ಆದರು ಸಹ ಸುಮಾರು 2,50,000 ಮೆ.ಟನ್ ಕಬ್ಬು ನುರಿಸುವ ಉತ್ತಮ ಗುರಿಯನ್ನು ಹೊಂದಲಾಗಿದ್ದು, ಪ್ರಸ್ತುತ 1,90,000 ಮರು ಕಬ್ಬು ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ಹೊರಜಿಲ್ಲೆಯ ಮೂಲಕ ನುರಿಸಲಾಗುವುದು ಎಂದರು.
ಕಾರ್ಖಾನೆಯ ಲಾಭ, ನಷ್ಠದ ಆಧಾರದ ಮೇಲೆ ಸದ್ಯಕ್ಕೆ ಕಾರ್ಯನಿರ್ವಹಿಸುವುದು ಕಷ್ಟಕರ. ರೈತರ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆ ಲಾಭಾದಯಕವಾಗಿ ನಡೆಯಲಿದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…