ಮಂಡ್ಯ

ಎನ್ ಡಿ.ಆರ್.ಎಫ್ ನಿಯಮದಂತೆ ಬರ ಪರಿಹಾರ; ಡಾ: ಕುಮಾರ

ಮಂಡ್ಯ:  ಎನ್. ಡಿ.ಆರ್ ಎಫ್ ನಿಯಮದಂತೆ ಬರ ಪರಿಹಾರ ನೀಡಲು ಭತ್ತ, ರಾಗಿ, ಜೋಳ ಮತ್ತು ನೆಲಗಡಲೆ 4 ಬೆಳೆಗಳು ನಿಗಧಿಯಾಗಿದ್ದು, ರೈತರ ಮನವಿಯಂತೆ ಕಬ್ಬು ಹಾಗೂ ತೆಂಗು ಬೆಳೆಯನ್ನು ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಇಂದು(ಮೇ.29) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಕುಂದು ಕೊರತೆಗಳು ಕುರಿತಂತೆ ಸಭೆ ನಡೆಸಿ ಮಾತನಾಡಿದ ಅವರು,  ಕೆ.ಆರ್.ಎಸ್ ನಿಂದ ಬೆಳೆಗಳಿಗೆ ನೀರು ಬಿಡುಗಡೆ ಮಾಡಲು ನೀರಾವರಿ ಸಲಹಾ ಸಮಿತಿ  ಸಭೆ ನಡೆಸಿ ರೈತರಿಗೆ ತಿಳಿಸಿಯೇ ನೀರು ಬಿಡುಗಡೆ ಮಾಡಲಾಗುವುದು. ನೀರು ಬಿಡುಗಡೆಯ ಸಂದರ್ಭದಲ್ಲಿ ವಿ.ಸಿ.ನಾಲೆ ಆಧುನೀಕರಣ ಅಥವಾ ಯಾವುದೇ ಕಾಮಗಾರಿಗಳಿದ್ದಲ್ಲಿ ನಿಲುಗಡೆ ಮಾಡಿ ನೀರು ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ರೈತರಿಗೆ ಆತಂಕ ಬೇಡ ಎಂದರು.

55000 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು;  ಜಿಲ್ಲೆಗೆ 90000 ಮೆಟ್ರಿಕ್ ಟನ್ ರಸಗೊಬ್ಬರ ಬೇಕಿದ್ದು, 55000 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುತ್ತದೆ. ಬೇಡಿಕೆ ಅನುಸಾರ ಉಳಿದ ರಸಗೊಬ್ಬರ ತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 540 ಪರವಾನಗಿ ಹೊಂದಿರುವ ರಸಗೊಬ್ಬರ ಮಾರಾಟಗಾರರಿದ್ದು, ಅವರಿಗೆ ರಸಗೊಬ್ಬರಗಳ ದರ ಹಾಗೂ ದಾಸ್ತಾನು ವಿವರವನ್ನು ಅನಾವರಣಗೊಳಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

17800 ಪೌತಿ ಖಾತೆ ಕಳೆದ ಸಾಲಿನಲ್ಲಿ ಸರ್ವೆ ನಡೆಸಿದ ಸಂದರ್ಭದಲ್ಲಿ ಮೃತ ರೈತರ ಹೆಸರಿನಲ್ಲೇ ಭೂಮಿ ಇದ್ದದ್ದು, ಕಂಡು ಬಂದ ಹಿನ್ನಲೆ 22,000 ಪ್ರಕರಣಗಳನ್ನು ಪತ್ತೆ ಮಾಡಿ ಪೌತಿ ಖಾತೆ ಆಂದೋಲನ ನಡೆಸಿ ಸುಮಾರು 17800 ಪೌತಿ ಖಾತೆ ಮಾಡಲಾಗಿದೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಇದ್ದ 11800 ಪ್ರಕರಣಗಳಲ್ಲಿ 9700 ಪ್ರಕರಣ ವಿಲೇವಾರಿ ಮಾಡಲಾಗಿದೆ. ಕಂದಾಯ ಇಲಾಖೆ ಹಂತ ಹಂತವಾಗಿ ರೈತರ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದರು.

ಜೂನ್ 8 ರಂದು ಕುಂದು ಕೊರತೆ ಸಭೆ ಚೆಸ್ಕಾಂಗೆ ಸಂಬಂಧಿಸಿದಂತೆ ಹಲವಾರು ರೈತರಿಂದ ದೂರು ಬಂದ ಹಿನ್ನಲೆಯಲ್ಲಿ ಜೂನ್ 8 ರಂದು ರೈತರ ಕುಂದು ಕೊರತೆ ಸಭೆ ನಡೆಸುವಂತೆ ಚೆಸ್ಕಾಂ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಅವರಿಗೆ ತಿಳಿಸಿದರು.

ರೈತರ ಕಾರ್ಯಾಗಾರ ನಡೆಸಿ ಕೃಷಿ, ತೋಟಗಾರಿಕೆ ಇಲಾಖೆಯಿಂದ ದೊರಕುವ ಸೌಲಭ್ಯ, ಸವಲತ್ತು, ಕೃಷಿ ಪದ್ಧತಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ಕಾರ್ಯಾಗಾರ ನಡೆಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ತಿಳಿಸಿದರು‌.

ತಾಲ್ಲೂಕು ಮಟ್ಟದಲ್ಲಿ ಸಭೆ ; ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ರೈತರ ಕುಂದು ಕೊರತೆ ಸಭೆ ನಡೆಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಎರಡು ತಾಲ್ಲೂಕಿನಲ್ಲಿ ಮಾತ್ರ ಸಭೆ ನಡೆಸಿದ್ದು, ಉಳಿದ ತಾಲ್ಲೂಕಿನಲ್ಲೂ ಸಭೆ ನಡೆಸಲು ತಿಳಿಸಲಾಗುವುದು.

ಕಲ್ಯಾಣಿಗಳ ಅಭಿವೃದ್ಧಿ ಗಳಿಗೆ ಕ್ರಮ ಜಿಲ್ಲಾ ಪಂಚಾಯತ್ ವತಿಯಿಂದ ಈಗಾಗಲೇ 80 ಕಲ್ಯಾಣಿ ಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಲ್ಯಾಣಿಗಳ ಅಭಿವೃದ್ಧಿಗಳಿಸಲು ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್  ತಿಳಿಸಿದರು.

ಹೂಳು ತಗೆಯುವ ಕೆಲಸದ ಮೇಲುಸ್ತುವಾರಿ ವಹಿಸಿ ರೈತರು ಕೆರೆಗಳಿಂದ ಹೂಳು ತೆಗೆಯಲು ಅನುಮತಿ ನೀಡಿದ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ರೈತರು ವೈಜ್ಞಾನಿಕವಾಗಿ ಹೂಳು ತೆಗೆಯುವಂತೆ ಮೇಲುಸ್ತುವಾರಿ ವಹಿಸಬೇಕು ಎಂದರು.

ಪೌತಿ ಖಾತೆಗೆ ನಾಡ ಕಚೇರಿಗೆ ಹೋಗಿ ಆನ್ ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ತಮ್ಮ ಕೆಲಸ ಆಗುತ್ತದೆ. ಯಾವುದೇ ಗ್ರಾಮ ಲೆಕ್ಕ ಅಧಿಕಾರಿಗಳನ್ನು ಹುಡುಕಿಕೊಂಡು ಹೋಗಬೇಡಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್. ಎಲ್ ನಾಗರಾಜು  ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ಅಶೋಕ ಮಾತನಾಡಿ, ಜಿಲ್ಲೆಯಲ್ಲಿ ಬಿತ್ತನೆ ಬೀಜದ ಕೊರತೆ ಇಲ್ಲ. ರೈತರ ಬೇಡಿಕೆ ಅನುಗುಣವಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಹಸಿರೆಲೆ ಗೊಬ್ಬರದ ಬೀಜಗಳ ಬೇಡಿಕೆ ಹೆಚ್ಚಿದ್ದು, ಎರಡು ದಿನಗಳಲ್ಲಿ 1800 ಕ್ವಿಂಟಾಲ್ ಜಿಲ್ಲೆಗೆ ದಾಸ್ತಾನು ಆಗಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹೇಶ್, ಕಾವೇರಿ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಇಂಜಿನಿಯರ್ ರಘುರಾಂ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago