ಮಂಡ್ಯ

ಎನ್ ಡಿ.ಆರ್.ಎಫ್ ನಿಯಮದಂತೆ ಬರ ಪರಿಹಾರ; ಡಾ: ಕುಮಾರ

ಮಂಡ್ಯ:  ಎನ್. ಡಿ.ಆರ್ ಎಫ್ ನಿಯಮದಂತೆ ಬರ ಪರಿಹಾರ ನೀಡಲು ಭತ್ತ, ರಾಗಿ, ಜೋಳ ಮತ್ತು ನೆಲಗಡಲೆ 4 ಬೆಳೆಗಳು ನಿಗಧಿಯಾಗಿದ್ದು, ರೈತರ ಮನವಿಯಂತೆ ಕಬ್ಬು ಹಾಗೂ ತೆಂಗು ಬೆಳೆಯನ್ನು ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಇಂದು(ಮೇ.29) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಕುಂದು ಕೊರತೆಗಳು ಕುರಿತಂತೆ ಸಭೆ ನಡೆಸಿ ಮಾತನಾಡಿದ ಅವರು,  ಕೆ.ಆರ್.ಎಸ್ ನಿಂದ ಬೆಳೆಗಳಿಗೆ ನೀರು ಬಿಡುಗಡೆ ಮಾಡಲು ನೀರಾವರಿ ಸಲಹಾ ಸಮಿತಿ  ಸಭೆ ನಡೆಸಿ ರೈತರಿಗೆ ತಿಳಿಸಿಯೇ ನೀರು ಬಿಡುಗಡೆ ಮಾಡಲಾಗುವುದು. ನೀರು ಬಿಡುಗಡೆಯ ಸಂದರ್ಭದಲ್ಲಿ ವಿ.ಸಿ.ನಾಲೆ ಆಧುನೀಕರಣ ಅಥವಾ ಯಾವುದೇ ಕಾಮಗಾರಿಗಳಿದ್ದಲ್ಲಿ ನಿಲುಗಡೆ ಮಾಡಿ ನೀರು ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ರೈತರಿಗೆ ಆತಂಕ ಬೇಡ ಎಂದರು.

55000 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು;  ಜಿಲ್ಲೆಗೆ 90000 ಮೆಟ್ರಿಕ್ ಟನ್ ರಸಗೊಬ್ಬರ ಬೇಕಿದ್ದು, 55000 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುತ್ತದೆ. ಬೇಡಿಕೆ ಅನುಸಾರ ಉಳಿದ ರಸಗೊಬ್ಬರ ತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 540 ಪರವಾನಗಿ ಹೊಂದಿರುವ ರಸಗೊಬ್ಬರ ಮಾರಾಟಗಾರರಿದ್ದು, ಅವರಿಗೆ ರಸಗೊಬ್ಬರಗಳ ದರ ಹಾಗೂ ದಾಸ್ತಾನು ವಿವರವನ್ನು ಅನಾವರಣಗೊಳಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

17800 ಪೌತಿ ಖಾತೆ ಕಳೆದ ಸಾಲಿನಲ್ಲಿ ಸರ್ವೆ ನಡೆಸಿದ ಸಂದರ್ಭದಲ್ಲಿ ಮೃತ ರೈತರ ಹೆಸರಿನಲ್ಲೇ ಭೂಮಿ ಇದ್ದದ್ದು, ಕಂಡು ಬಂದ ಹಿನ್ನಲೆ 22,000 ಪ್ರಕರಣಗಳನ್ನು ಪತ್ತೆ ಮಾಡಿ ಪೌತಿ ಖಾತೆ ಆಂದೋಲನ ನಡೆಸಿ ಸುಮಾರು 17800 ಪೌತಿ ಖಾತೆ ಮಾಡಲಾಗಿದೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಇದ್ದ 11800 ಪ್ರಕರಣಗಳಲ್ಲಿ 9700 ಪ್ರಕರಣ ವಿಲೇವಾರಿ ಮಾಡಲಾಗಿದೆ. ಕಂದಾಯ ಇಲಾಖೆ ಹಂತ ಹಂತವಾಗಿ ರೈತರ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದರು.

ಜೂನ್ 8 ರಂದು ಕುಂದು ಕೊರತೆ ಸಭೆ ಚೆಸ್ಕಾಂಗೆ ಸಂಬಂಧಿಸಿದಂತೆ ಹಲವಾರು ರೈತರಿಂದ ದೂರು ಬಂದ ಹಿನ್ನಲೆಯಲ್ಲಿ ಜೂನ್ 8 ರಂದು ರೈತರ ಕುಂದು ಕೊರತೆ ಸಭೆ ನಡೆಸುವಂತೆ ಚೆಸ್ಕಾಂ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಅವರಿಗೆ ತಿಳಿಸಿದರು.

ರೈತರ ಕಾರ್ಯಾಗಾರ ನಡೆಸಿ ಕೃಷಿ, ತೋಟಗಾರಿಕೆ ಇಲಾಖೆಯಿಂದ ದೊರಕುವ ಸೌಲಭ್ಯ, ಸವಲತ್ತು, ಕೃಷಿ ಪದ್ಧತಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ಕಾರ್ಯಾಗಾರ ನಡೆಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ತಿಳಿಸಿದರು‌.

ತಾಲ್ಲೂಕು ಮಟ್ಟದಲ್ಲಿ ಸಭೆ ; ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ರೈತರ ಕುಂದು ಕೊರತೆ ಸಭೆ ನಡೆಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಎರಡು ತಾಲ್ಲೂಕಿನಲ್ಲಿ ಮಾತ್ರ ಸಭೆ ನಡೆಸಿದ್ದು, ಉಳಿದ ತಾಲ್ಲೂಕಿನಲ್ಲೂ ಸಭೆ ನಡೆಸಲು ತಿಳಿಸಲಾಗುವುದು.

ಕಲ್ಯಾಣಿಗಳ ಅಭಿವೃದ್ಧಿ ಗಳಿಗೆ ಕ್ರಮ ಜಿಲ್ಲಾ ಪಂಚಾಯತ್ ವತಿಯಿಂದ ಈಗಾಗಲೇ 80 ಕಲ್ಯಾಣಿ ಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಲ್ಯಾಣಿಗಳ ಅಭಿವೃದ್ಧಿಗಳಿಸಲು ಯೋಜನೆ ರೂಪಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್  ತಿಳಿಸಿದರು.

ಹೂಳು ತಗೆಯುವ ಕೆಲಸದ ಮೇಲುಸ್ತುವಾರಿ ವಹಿಸಿ ರೈತರು ಕೆರೆಗಳಿಂದ ಹೂಳು ತೆಗೆಯಲು ಅನುಮತಿ ನೀಡಿದ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ರೈತರು ವೈಜ್ಞಾನಿಕವಾಗಿ ಹೂಳು ತೆಗೆಯುವಂತೆ ಮೇಲುಸ್ತುವಾರಿ ವಹಿಸಬೇಕು ಎಂದರು.

ಪೌತಿ ಖಾತೆಗೆ ನಾಡ ಕಚೇರಿಗೆ ಹೋಗಿ ಆನ್ ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ತಮ್ಮ ಕೆಲಸ ಆಗುತ್ತದೆ. ಯಾವುದೇ ಗ್ರಾಮ ಲೆಕ್ಕ ಅಧಿಕಾರಿಗಳನ್ನು ಹುಡುಕಿಕೊಂಡು ಹೋಗಬೇಡಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್. ಎಲ್ ನಾಗರಾಜು  ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ಅಶೋಕ ಮಾತನಾಡಿ, ಜಿಲ್ಲೆಯಲ್ಲಿ ಬಿತ್ತನೆ ಬೀಜದ ಕೊರತೆ ಇಲ್ಲ. ರೈತರ ಬೇಡಿಕೆ ಅನುಗುಣವಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಹಸಿರೆಲೆ ಗೊಬ್ಬರದ ಬೀಜಗಳ ಬೇಡಿಕೆ ಹೆಚ್ಚಿದ್ದು, ಎರಡು ದಿನಗಳಲ್ಲಿ 1800 ಕ್ವಿಂಟಾಲ್ ಜಿಲ್ಲೆಗೆ ದಾಸ್ತಾನು ಆಗಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹೇಶ್, ಕಾವೇರಿ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಇಂಜಿನಿಯರ್ ರಘುರಾಂ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

2 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

2 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

2 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

6 hours ago