ಮಂಡ್ಯ

ಬರ ಪರಿಹಾರ ಹಣ; ಸಾಲದ ಖಾತೆಗೆ ಜಮೆ ಮಾಡದಂತೆ ಬ್ಯಾಂಕ್‌ಗಳಿಗೆ ಸೂಚನೆ

ಮಂಡ್ಯ:  ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು.

ಇಂದು(ಮೇ.೨೭) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರು ತೀವ್ರ ಬರದಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ರೈತರ ಬರ ಪರಿಹಾರ ಹಣವನ್ನು ಸಾಲಕ್ಕೆ ಹೊಂದಾಣಿಕೆ ಮಾಡದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ. ಒಂದು ವೇಳೆ ಸಾಲಕ್ಕೆ ಹೊಂದಣಿಕೆ ಮಾಡಿಕೊಂಡಿದ್ದರೆ ಅದನ್ನು ರೈತರ ಖಾತೆಗೆ ಹಿಂದಿರುಗಿಸಿ, ಈ ಬಗ್ಗೆ ದೂರು ಬರದಂತೆ ನೋಡಿಕೊಳ್ಳಿ, ಒಂದು ವೇಳೆ ಸಾಲದ ಖಾತೆಗ ಜಮೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಳೆದ ಸಾಲಿನಲ್ಲಿ ಪ್ರಾಣಿ ದಾಳಿಯಿಂದ ಉಂಟಾದ ಬೆಳೆ ನಷ್ಟ ಕುರಿತಂತೆ 568 ಪ್ರಕರಣಗಳು ವರದಿಯಾಗಿದೆ. ಇವುಗಳಿಗೆ ಪಾವತಿಯಾಗಿರುವ ಪರಿಹಾರ ಕುರಿತಂತೆ ವರದಿ ನೀಡುವಂತೆ  ಸಂಬಂಧಪಟ್ಟ ಅಧಿಕಾರಿಗಳಿಗೆ  ತಿಳಿಸಿದರು.

ಮಳೆ, ಗಾಳಿಯಿಂದ ಮರದ ಕೊಂಬೆಗಳು ವಿದ್ಯುತ್ ಸಂಪರ್ಕದ ಲೈನ್ ಮೇಲೆ ಬೀಳುತ್ತಿದ್ದು, ವಿದ್ಯುತ್ ಅಡಚಣೆ ಉಂಟಾಗುತ್ತಿದೆ ಎಂದು ದೂರುಗಳು ಬರುತ್ತಿವೆ. ತೊಂದರೆ ಉಂಟು ಮಾಡುವ ಮರದ ಕೊಂಬೆಗಳನ್ನು ತೆರವುಗೊಳಿಸಿ. ಮಳೆ, ಗಾಳಿಯಿಂದ ವಿದ್ಯುತ್ ಕಂಬಗಳು ಬಿದ್ದಲ್ಲಿ ಅದಷ್ಟು ಬೇಗ 24 ಗಂಟೆಯೊಳಗಾಗಿ ಸರಿಪಡಿಸಿ ಎಂದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಉಪ ವಿಭಾಗಾಧಿಕಾರಿ ಮಹೇಶ್, , ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್, ಅರಣ್ಯ ಇಲಾಖೆಯ ಅಧಿಕಾರಿ ಶಿಲ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ರೂಪಶ್ರೀ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ ಸುರೇಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

2 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

2 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

3 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

3 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

3 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

4 hours ago