krs dam
ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ.
ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ.
ಕೆಆರ್ಎಸ್ ಡ್ಯಾಂ 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿದ್ದು, ಶನಿವಾರ 102.00 ಅಡಿ ಇದ್ದ ಡ್ಯಾಂನ ನೀರಿನ ಮಟ್ಟವು ಭಾನುವಾರ 103.70 ಅಡಿಗೆ ಏರಿಕೆಯಾಗಿದೆ. ಡ್ಯಾಂಗೆ 17,544 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಡ್ಯಾಂನಿಂದ 735 ಕ್ಯೂಸೆಕ್ ನೀರಿನ ಹೊರಹರಿವಿದೆ. 49.452 ಟಿಎಂಸಿ ಸಾಮರ್ಥ್ಯವಿರುವ ಡ್ಯಾಂನಲ್ಲಿ 25.851 ಟಿಎಂಸಿ ನೀರು ಸಂಗ್ರಹವಾಗಿದೆ. ಇದೀಗ ಜೂನ್ ತಿಂಗಳ ಮೊದಲ ದಿನವೇ ಡ್ಯಾಂ ಅರ್ಧದಷ್ಟು ಭರ್ತಿಯಾಗಿದೆ.
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…