ಮಂಡ್ಯ

ದಸರಾ ಸ್ತಬ್ಧಚಿತ್ರ: ಮಂಡ್ಯಕ್ಕೆ ಪ್ರಥಮ ಬಹುಮಾನ

ಮಂಡ್ಯ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಿಗೆ ಬಹುಮಾನ ಘೋಷಿಸಲಾಗಿದ್ದು, ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರವು ಪ್ರಥಮ ಸ್ಥಾನ ಗಳಿಸಿದೆ.

ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು.

ಇನ್ನೂ ಧಾರವಾಡ ಜಿಲ್ಲೆಯ ಇಸ್ರೋಗೆ ಗಗನಯಾನದಲ್ಲಿ ಹಣ್ಣಿನ ನೊಣಗಳು ದ್ವಿತೀಯ, ಚಾಮರಾಜನಗರ ಜಿಲ್ಲೆಯ ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು ಸ್ತಬ್ಧಚಿತ್ರಕ್ಕೆ ತೃತೀಯ ಸ್ಥಾನ, ಗದಗ ಜಿಲ್ಲೆಯ ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು, ಮೈಸೂರು ಜಿಲ್ಲೆಯ ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದೆಡೆಗೆ, ಚಿಕ್ಕಮಗಳೂರು ಜಿಲ್ಲೆ ತೇಜಸ್ವಿ ವಿಸ್ಮಯ ಲೋಕ ಸ್ತಬ್ಧಚಿತ್ರಕ್ಕೆ ಸಮಾಧಾನಕರ ಬಹುಮಾನ ಗಳಿಸಿದೆ.

ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಭಾಗವಹಿಸಿ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿರುವ ವಾರ್ತಾ ಇಲಾಖೆಯ ವಿಶ್ವಗುರು ಬಸವಣ್ಣ, ರಾಷ್ಟ್ರಪಿತ ಮಹಾತ್ಮಗಾಂಧಿಜಿ ಸ್ತಬ್ಧಚಿತ್ರಕ್ಕೆ ಪ್ರಥಮ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆಸಾಧಿಸುವುದು ಸ್ತಬ್ಧಚಿತ್ರಕ್ಕೆ ದ್ವಿತೀಯ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ದೊರೆತಿದೆ. ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಸ್ತಬ್ಧಚಿತ್ರ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸ್ವಸ್ಥ ಮೆದುಳು:ಸ್ಪಷ್ಟ ಮಾತು ಸ್ತಬ್ಧಚಿತ್ರ, ಕಾರ್ಮಿಕ ಇಲಾಖೆಯ ಕಾರ್ಮಿಕರ ಹಿತರಕ್ಷಣೆ ಸ್ತಬ್ಧಚಿತ್ರ, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ನಿಗಮದ ಉತ್ಪನ್ನಗಳ ಮಾದರಿ ಕುರಿತ ಸ್ತಬ್ಧಚಿತ್ರವು ಸಮಾಧಾನಕರ ಬಹುಮಾನ ಪಡೆದಿವೆ ಎಂದು ಸ್ತಬ್ಧಚಿತ್ರ ಉಪಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

9 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

9 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

9 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago