ಮಂಡ್ಯ

ದಸರಾ ಸ್ತಬ್ಧಚಿತ್ರ: ಮಂಡ್ಯಕ್ಕೆ ಪ್ರಥಮ ಬಹುಮಾನ

ಮಂಡ್ಯ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಿಗೆ ಬಹುಮಾನ ಘೋಷಿಸಲಾಗಿದ್ದು, ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರವು ಪ್ರಥಮ ಸ್ಥಾನ ಗಳಿಸಿದೆ.

ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು.

ಇನ್ನೂ ಧಾರವಾಡ ಜಿಲ್ಲೆಯ ಇಸ್ರೋಗೆ ಗಗನಯಾನದಲ್ಲಿ ಹಣ್ಣಿನ ನೊಣಗಳು ದ್ವಿತೀಯ, ಚಾಮರಾಜನಗರ ಜಿಲ್ಲೆಯ ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು ಸ್ತಬ್ಧಚಿತ್ರಕ್ಕೆ ತೃತೀಯ ಸ್ಥಾನ, ಗದಗ ಜಿಲ್ಲೆಯ ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು, ಮೈಸೂರು ಜಿಲ್ಲೆಯ ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದೆಡೆಗೆ, ಚಿಕ್ಕಮಗಳೂರು ಜಿಲ್ಲೆ ತೇಜಸ್ವಿ ವಿಸ್ಮಯ ಲೋಕ ಸ್ತಬ್ಧಚಿತ್ರಕ್ಕೆ ಸಮಾಧಾನಕರ ಬಹುಮಾನ ಗಳಿಸಿದೆ.

ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಭಾಗವಹಿಸಿ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿರುವ ವಾರ್ತಾ ಇಲಾಖೆಯ ವಿಶ್ವಗುರು ಬಸವಣ್ಣ, ರಾಷ್ಟ್ರಪಿತ ಮಹಾತ್ಮಗಾಂಧಿಜಿ ಸ್ತಬ್ಧಚಿತ್ರಕ್ಕೆ ಪ್ರಥಮ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆಸಾಧಿಸುವುದು ಸ್ತಬ್ಧಚಿತ್ರಕ್ಕೆ ದ್ವಿತೀಯ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ದೊರೆತಿದೆ. ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಸ್ತಬ್ಧಚಿತ್ರ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸ್ವಸ್ಥ ಮೆದುಳು:ಸ್ಪಷ್ಟ ಮಾತು ಸ್ತಬ್ಧಚಿತ್ರ, ಕಾರ್ಮಿಕ ಇಲಾಖೆಯ ಕಾರ್ಮಿಕರ ಹಿತರಕ್ಷಣೆ ಸ್ತಬ್ಧಚಿತ್ರ, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ನಿಗಮದ ಉತ್ಪನ್ನಗಳ ಮಾದರಿ ಕುರಿತ ಸ್ತಬ್ಧಚಿತ್ರವು ಸಮಾಧಾನಕರ ಬಹುಮಾನ ಪಡೆದಿವೆ ಎಂದು ಸ್ತಬ್ಧಚಿತ್ರ ಉಪಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

7 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

7 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

7 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

7 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

7 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

7 hours ago