ಮಂಡ್ಯ

ದಸರಾ ಸ್ತಬ್ಧಚಿತ್ರ: ಮಂಡ್ಯಕ್ಕೆ ಪ್ರಥಮ ಬಹುಮಾನ

ಮಂಡ್ಯ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಿಗೆ ಬಹುಮಾನ ಘೋಷಿಸಲಾಗಿದ್ದು, ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರವು ಪ್ರಥಮ ಸ್ಥಾನ ಗಳಿಸಿದೆ.

ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು.

ಇನ್ನೂ ಧಾರವಾಡ ಜಿಲ್ಲೆಯ ಇಸ್ರೋಗೆ ಗಗನಯಾನದಲ್ಲಿ ಹಣ್ಣಿನ ನೊಣಗಳು ದ್ವಿತೀಯ, ಚಾಮರಾಜನಗರ ಜಿಲ್ಲೆಯ ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು ಸ್ತಬ್ಧಚಿತ್ರಕ್ಕೆ ತೃತೀಯ ಸ್ಥಾನ, ಗದಗ ಜಿಲ್ಲೆಯ ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು, ಮೈಸೂರು ಜಿಲ್ಲೆಯ ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದೆಡೆಗೆ, ಚಿಕ್ಕಮಗಳೂರು ಜಿಲ್ಲೆ ತೇಜಸ್ವಿ ವಿಸ್ಮಯ ಲೋಕ ಸ್ತಬ್ಧಚಿತ್ರಕ್ಕೆ ಸಮಾಧಾನಕರ ಬಹುಮಾನ ಗಳಿಸಿದೆ.

ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಭಾಗವಹಿಸಿ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿರುವ ವಾರ್ತಾ ಇಲಾಖೆಯ ವಿಶ್ವಗುರು ಬಸವಣ್ಣ, ರಾಷ್ಟ್ರಪಿತ ಮಹಾತ್ಮಗಾಂಧಿಜಿ ಸ್ತಬ್ಧಚಿತ್ರಕ್ಕೆ ಪ್ರಥಮ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆಸಾಧಿಸುವುದು ಸ್ತಬ್ಧಚಿತ್ರಕ್ಕೆ ದ್ವಿತೀಯ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ದೊರೆತಿದೆ. ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಸ್ತಬ್ಧಚಿತ್ರ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸ್ವಸ್ಥ ಮೆದುಳು:ಸ್ಪಷ್ಟ ಮಾತು ಸ್ತಬ್ಧಚಿತ್ರ, ಕಾರ್ಮಿಕ ಇಲಾಖೆಯ ಕಾರ್ಮಿಕರ ಹಿತರಕ್ಷಣೆ ಸ್ತಬ್ಧಚಿತ್ರ, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ನಿಗಮದ ಉತ್ಪನ್ನಗಳ ಮಾದರಿ ಕುರಿತ ಸ್ತಬ್ಧಚಿತ್ರವು ಸಮಾಧಾನಕರ ಬಹುಮಾನ ಪಡೆದಿವೆ ಎಂದು ಸ್ತಬ್ಧಚಿತ್ರ ಉಪಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

4 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

5 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

7 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

7 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

12 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

14 hours ago