ಮಂಡ್ಯ

ಆಸ್ತಿ ತೆರಿಗೆ ಪಾವತಿಸುವುದು ನಾಗರೀಕನ ಕರ್ತವ್ಯ: ಡಾ. ಕುಮಾರ

ಮಂಡ್ಯ:  ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.

ಅವರು ಇಂದು (ಫೆ13) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರೆವಿನ್ಯೂ ಬಡಾವಣೆಗಳಲ್ಲಿನ ಆಸ್ತಿಗಳನ್ನು ನೋಂದಾಯಿಸುವ ಹೊಸ ಸುತ್ತೋಲೆ/ಮಾರ್ಗದರ್ಶನೆಗಳಂತೆ ನೋಂದಣಿ ಮಾಡುವ ಬಗ್ಗೆ ಹಾಗೂ ಫೆಬ್ರವರಿ 10 ರ ಅಂತ್ಯಕ್ಕೆ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಮತ್ತು ವಿಷಯಗಳ ಪ್ರಗತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಸ್ತಿ ತೆರಿಗೆ ಕಟ್ಟುತ್ತಿರುವವರ ಸಂಖ್ಯೆ ಜಿಲ್ಲೆಯಲ್ಲಿ ಕಡಿಮೆ ಇದ್ದು, ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿ ನಿಗದಿತವಾಗಿ ಮಾಡಿದರೆ ಮಾತ್ರ ಅಧಿಕಾರಿಗಳನ್ನು ಪ್ರಶ್ನಿಸಲು ಅರ್ಹರಾಗಿರುತ್ತಾರೆ. ಸ್ಥಳೀಯ ಸಂಸ್ಥೆ ಅಧಿಕಾರಿಗಳು ಆಸ್ತಿ ತೆರಿಗೆ ಪಾವತಿ ಕುರಿತು ಜಾಗೃತಿ, ವಸೂಲಾತಿ ಹಾಗೂ ಪ್ರಚಾರ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.

ಕರ್ನಾಟಕ ಮುನ್ಸಿಪಾಲಿಟಿ ತೆರಿಗೆ (ತಿದ್ದುಪಡಿ) ನಿಯಮಗಳು-2025

ರಾಜ್ಯ ಸರ್ಕಾರ ತೆರಿಗೆ ವಿಚಾರದ ಕುರಿತು ಇರುವ ಗೊಂದಲಗಳನ್ನು ಸರಿಪಡಿಸಲು ಹೊಸ ಮುನ್ಸಿಪಾಲಿಟಿ ತೆರಿಗೆಗೆ ಹೊಸ ತಿದ್ದುಪಡಿ ನಿಯಮವನ್ನು ಜಾರಿಗೊಳಿಸಿದೆ. ಈ ಕಾಯ್ದೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು, ಅಧಿಕಾರಿಗಳು ಈ ಕಾಯ್ದೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದರು.

ಅಧಿಕೃತ ಆಸ್ತಿ ಸ್ವತ್ತುಗಳು ಹಾಗೂ ಅನಧಿಕೃತ ಆಸ್ತಿ ಸ್ವತ್ತುಗಳು ಸಂಖ್ಯೆ ಎಷ್ಟಿದೆ ಎಂಬುದರ ಬಗ್ಗೆ ಅಧಿಕಾರಿಗಳ ಹತ್ತಿರ ನಿಖರ ಮಾಹಿತಿ ಇರಬೇಕು. ಅನಾಧಿಕೃತ ಆಸ್ತಿ ಸ್ವತ್ತುಗಳಿಗೆ ಬಿ ಖಾತಾ ಮಾಡಿ ಆಸ್ತಿ ತೆರಿಗೆ ವಸೂಲಾತಿ ಮಾಡಬೇಕು. ಆಸ್ತಿ ತೆರಿಗೆ ಪಾವತಿ ಮಾಡದೇ ಇರುವವರಿಗೆ ನೊಟೀಸ್ ಜಾರಿ ಮಾಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ ಎಂಬ ವಿಷಯವನ್ನು ಆಸ್ತಿ ಮಾಲೀಕರಿಗೆ ಮನದಟ್ಟು ಮಾಡಿಕೊಡಬೇಕು ಎಂದರು.

ಕರ್ನಾಟಕ ಮುನ್ಸಿಪಾಲಿಟಿ ತೆರಿಗೆ (ತಿದ್ದುಪಡಿ) ನಿಯಮಗಳ ಪ್ರಕಾರ ಆಸ್ತಿ ತೆರಿಗೆ ವಸೂಲಾತಿ ಮಾಡಲು ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ 25000 ರೂ ದಂಡ ವಿಧಿಸಲು ಅವಕಾಶವಿದೆ. ಅಧಿಕಾರಿಗಳು ಚುರುಕಾಗಿ ಕೆಲಸ ನಿರ್ವಹಿಸಿ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ

ಜಿಲ್ಲೆಯ ನಗರಗಳಲ್ಲಿ ಬಳಕೆಗೊಳ್ಳುತ್ತಿರುವ ನೀರಿನ ಗುಣಮಟ್ಟದ ಬಗ್ಗೆ ನಿಗದಿತವಾಗಿ ಕುಡಿಯುವ ನೀರಿನ ಲಭ್ಯತೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಕೋಶಕ್ಕೆ ಒಳಪಡುವ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಪ್ತಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದರು.

ಜಿಲ್ಲೆಯಲ್ಲಿ ನಗರ ನಿವೇಶನ ಯೋಜನೆಯಡಿ 70 ಕ್ಕೂ ಹೆಚ್ಚು ಎಕರೆ ಭೂಮಿ ಲಭ್ಯವಿರುವ ಜಾಗಗಳನ್ನು ಶೀಘ್ರವಾಗಿ ಫಲಾನುಭವಿಗಳು ತಲುಪಿಸುವ ಕಾರ್ಯ ನಿರ್ವಾಹಿಸಿ, ನಿವೇಶನ ರಹಿತ ಹಾಗೂ ವಸತಿ ರಹಿತರು ಜಿಲ್ಲೆಯಲ್ಲಿ ಎಷ್ಟು ಜನ ಇದ್ದಾರೆ ಎಂಬುದರ ನಿಖರ ಮಾಹಿತಿಯನ್ನು ಇಟ್ಟುಕೊಂಡು, ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಷನ್ ಪೋರ್ಟಲ್ ಗೆ ಆಪ್ ಲೋಡ್ ಮಾಡಿ ಎಂದು ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ಮಾಯಣ್ಣ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಜಲಮಂಡಳಿ ಇ.ಇ. ಮೇಘ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

33 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago